ಕ್ರೀಡೆ

ಇದೇ ಭಾನುವಾರ ಭಾರತ-ಪಾಕ್‌ ಮತ್ತೆ ಮುಖಾಮುಖಿ : ಕಾತುರದಿಂದ ಎದುರು ನೋಡುತ್ತಿರುವ ಅಭಿಮಾನಿಗಳು

ಏಷ್ಯಾಕಪ್: ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್​ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್​ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.

ಇನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್​- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಒಂದು ವೇಳೆ ಹಾಂಗ್​ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.

ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್​ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago