ಕ್ರೀಡೆ

ಇದೇ ಭಾನುವಾರ ಭಾರತ-ಪಾಕ್‌ ಮತ್ತೆ ಮುಖಾಮುಖಿ : ಕಾತುರದಿಂದ ಎದುರು ನೋಡುತ್ತಿರುವ ಅಭಿಮಾನಿಗಳು

ಏಷ್ಯಾಕಪ್: ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್​ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್​ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.

ಇನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್​- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಒಂದು ವೇಳೆ ಹಾಂಗ್​ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.

ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್​ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.

 

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago