ಏಷ್ಯಾಕಪ್: ಏಷ್ಯಾಕಪ್ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.
ಇನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.
ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.
ಒಂದು ವೇಳೆ ಹಾಂಗ್ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.
ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…