ಕ್ರೀಡೆ

ಭಾರತ – ಪಾಕ್ ಆಟಗಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಕು : ಕ್ರಿಸ್ ಗೇಲ್ ಅಚ್ಚರಿ ಹೇಳಿಕೆ

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago