ಕ್ರೀಡೆ

ಭಾರತ – ಪಾಕ್ ಆಟಗಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಕು : ಕ್ರಿಸ್ ಗೇಲ್ ಅಚ್ಚರಿ ಹೇಳಿಕೆ

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

lokesh

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

2 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

2 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

2 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

3 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

3 hours ago