ಕ್ರೀಡೆ

ಭಾರತ – ಪಾಕ್ ಆಟಗಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಕು : ಕ್ರಿಸ್ ಗೇಲ್ ಅಚ್ಚರಿ ಹೇಳಿಕೆ

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

lokesh

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

52 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

56 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

1 hour ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

4 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

4 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

4 hours ago