ಕ್ರೀಡೆ

ಭಾರತ – ಪಾಕ್ ಆಟಗಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಕು : ಕ್ರಿಸ್ ಗೇಲ್ ಅಚ್ಚರಿ ಹೇಳಿಕೆ

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

lokesh

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

4 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

7 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

8 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

9 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

10 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

14 hours ago