ಕ್ರೀಡೆ

ಭಾರತ – ಪಾಕ್ ಆಟಗಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಕು : ಕ್ರಿಸ್ ಗೇಲ್ ಅಚ್ಚರಿ ಹೇಳಿಕೆ

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago