ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ.
182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು.
ಪಾಕಿಸ್ತಾನದ ನಾಯಕ ಹಾಗೂ ಬ್ಯಾಟರ್ ಬಾಬರ್ ಆಝಂ ಬೇಗನೆ ವಿಕೆಟ್ ಕೈಚಲ್ಲಿದರು. ಫಾಖರ್ ಜುಮಾನ್ ಅವರು ಪದ್ಯಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಔಟಾದರು. ಆಗ ಜೊತೆಯಾದ ರಿಝ್ವಾನ್ ಹಾಗೂ ಮೊಹಮ್ಮದ್ ನವಾಜ್ 3ನೇ ವಿಕೆಟಿಗೆ 73 ರನ್ ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ನವಾಝ್ ವಿಕೆಟ್ ಉರುಳುಸಿದ ಭುವನೇಶ್ವರ ಕುಮಾರ್ ಈ ಜೋಡಿಯನ್ನು ಬೇರ್ಪಡಿಸಿದರು.
17ನೇ ಓವರ್ ನಲ್ಲಿ ರಿಝ್ವಾನ್ ವಿಕೆಟ್ ಅನ್ನು ಕಬಳಿಸಿದ ಹಾರ್ದಿಕ ಪಾಂಡ್ಯ ಪಾಕ್ ಗೆ ಆಘಾತ ನೀಡಿದರು. ಖುಷ್ ದಿಲ್ ಶಾ 14 ಹಾಗೂ ಆಸಿಫ್ ಅಲಿ 16 ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸಿದರು.
ಬೌಲಿಂಗ್ ನಲ್ಲಿ ಭಾರತದ ಪರ ಭುವನೇಶ್ವರ್, ಬಿಷ್ಣೋಯಿ, ಹಾರ್ದಿಕ್ ಪಾಂಡ್ಯ, ಯದುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ (60 ರನ್ 44 ಎಸೆತ) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…