ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ.
182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು.
ಪಾಕಿಸ್ತಾನದ ನಾಯಕ ಹಾಗೂ ಬ್ಯಾಟರ್ ಬಾಬರ್ ಆಝಂ ಬೇಗನೆ ವಿಕೆಟ್ ಕೈಚಲ್ಲಿದರು. ಫಾಖರ್ ಜುಮಾನ್ ಅವರು ಪದ್ಯಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಔಟಾದರು. ಆಗ ಜೊತೆಯಾದ ರಿಝ್ವಾನ್ ಹಾಗೂ ಮೊಹಮ್ಮದ್ ನವಾಜ್ 3ನೇ ವಿಕೆಟಿಗೆ 73 ರನ್ ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ನವಾಝ್ ವಿಕೆಟ್ ಉರುಳುಸಿದ ಭುವನೇಶ್ವರ ಕುಮಾರ್ ಈ ಜೋಡಿಯನ್ನು ಬೇರ್ಪಡಿಸಿದರು.
17ನೇ ಓವರ್ ನಲ್ಲಿ ರಿಝ್ವಾನ್ ವಿಕೆಟ್ ಅನ್ನು ಕಬಳಿಸಿದ ಹಾರ್ದಿಕ ಪಾಂಡ್ಯ ಪಾಕ್ ಗೆ ಆಘಾತ ನೀಡಿದರು. ಖುಷ್ ದಿಲ್ ಶಾ 14 ಹಾಗೂ ಆಸಿಫ್ ಅಲಿ 16 ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸಿದರು.
ಬೌಲಿಂಗ್ ನಲ್ಲಿ ಭಾರತದ ಪರ ಭುವನೇಶ್ವರ್, ಬಿಷ್ಣೋಯಿ, ಹಾರ್ದಿಕ್ ಪಾಂಡ್ಯ, ಯದುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ (60 ರನ್ 44 ಎಸೆತ) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…