ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ.
182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು.
ಪಾಕಿಸ್ತಾನದ ನಾಯಕ ಹಾಗೂ ಬ್ಯಾಟರ್ ಬಾಬರ್ ಆಝಂ ಬೇಗನೆ ವಿಕೆಟ್ ಕೈಚಲ್ಲಿದರು. ಫಾಖರ್ ಜುಮಾನ್ ಅವರು ಪದ್ಯಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಔಟಾದರು. ಆಗ ಜೊತೆಯಾದ ರಿಝ್ವಾನ್ ಹಾಗೂ ಮೊಹಮ್ಮದ್ ನವಾಜ್ 3ನೇ ವಿಕೆಟಿಗೆ 73 ರನ್ ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ನವಾಝ್ ವಿಕೆಟ್ ಉರುಳುಸಿದ ಭುವನೇಶ್ವರ ಕುಮಾರ್ ಈ ಜೋಡಿಯನ್ನು ಬೇರ್ಪಡಿಸಿದರು.
17ನೇ ಓವರ್ ನಲ್ಲಿ ರಿಝ್ವಾನ್ ವಿಕೆಟ್ ಅನ್ನು ಕಬಳಿಸಿದ ಹಾರ್ದಿಕ ಪಾಂಡ್ಯ ಪಾಕ್ ಗೆ ಆಘಾತ ನೀಡಿದರು. ಖುಷ್ ದಿಲ್ ಶಾ 14 ಹಾಗೂ ಆಸಿಫ್ ಅಲಿ 16 ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸಿದರು.
ಬೌಲಿಂಗ್ ನಲ್ಲಿ ಭಾರತದ ಪರ ಭುವನೇಶ್ವರ್, ಬಿಷ್ಣೋಯಿ, ಹಾರ್ದಿಕ್ ಪಾಂಡ್ಯ, ಯದುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ (60 ರನ್ 44 ಎಸೆತ) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…