ಕ್ರೀಡೆ

ಭಾರತದ ವಿರುದ್ಧ ಪಾಕಿಸ್ತಾನಕ್ಕೆ ರೋಚಕ ಜಯ!

ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ.

182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು.

ಪಾಕಿಸ್ತಾನದ ನಾಯಕ ಹಾಗೂ ಬ್ಯಾಟರ್ ಬಾಬರ್ ಆಝಂ ಬೇಗನೆ ವಿಕೆಟ್ ಕೈಚಲ್ಲಿದರು. ಫಾಖರ್ ಜುಮಾನ್ ಅವರು ಪದ್ಯಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಔಟಾದರು. ಆಗ ಜೊತೆಯಾದ ರಿಝ್ವಾನ್ ಹಾಗೂ ಮೊಹಮ್ಮದ್ ನವಾಜ್ 3ನೇ ವಿಕೆಟಿಗೆ 73 ರನ್ ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ನವಾಝ್ ವಿಕೆಟ್ ಉರುಳುಸಿದ ಭುವನೇಶ್ವರ ಕುಮಾರ್ ಈ ಜೋಡಿಯನ್ನು ಬೇರ್ಪಡಿಸಿದರು.

17ನೇ ಓವರ್ ನಲ್ಲಿ ರಿಝ್ವಾನ್ ವಿಕೆಟ್ ಅನ್ನು ಕಬಳಿಸಿದ ಹಾರ್ದಿಕ ಪಾಂಡ್ಯ ಪಾಕ್ ಗೆ ಆಘಾತ ನೀಡಿದರು. ಖುಷ್ ದಿಲ್ ಶಾ 14 ಹಾಗೂ ಆಸಿಫ್ ಅಲಿ 16 ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸಿದರು.

ಬೌಲಿಂಗ್ ನಲ್ಲಿ ಭಾರತದ ಪರ ಭುವನೇಶ್ವರ್, ಬಿಷ್ಣೋಯಿ, ಹಾರ್ದಿಕ್ ಪಾಂಡ್ಯ, ಯದುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ  ಅರ್ಧ ಶತಕ (60 ರನ್ 44 ಎಸೆತ) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.

andolanait

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

7 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

7 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

8 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

11 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

11 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

12 hours ago