ಕ್ರೀಡೆ

ಭಾರತದ ವಿರುದ್ಧ ಪಾಕಿಸ್ತಾನಕ್ಕೆ ರೋಚಕ ಜಯ!

ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ.

182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು.

ಪಾಕಿಸ್ತಾನದ ನಾಯಕ ಹಾಗೂ ಬ್ಯಾಟರ್ ಬಾಬರ್ ಆಝಂ ಬೇಗನೆ ವಿಕೆಟ್ ಕೈಚಲ್ಲಿದರು. ಫಾಖರ್ ಜುಮಾನ್ ಅವರು ಪದ್ಯಕ್ಕೆ ಇಳಿದ ಕೆಲವೇ ನಿಮಿಷಗಳಲ್ಲಿ ಔಟಾದರು. ಆಗ ಜೊತೆಯಾದ ರಿಝ್ವಾನ್ ಹಾಗೂ ಮೊಹಮ್ಮದ್ ನವಾಜ್ 3ನೇ ವಿಕೆಟಿಗೆ 73 ರನ್ ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ನವಾಝ್ ವಿಕೆಟ್ ಉರುಳುಸಿದ ಭುವನೇಶ್ವರ ಕುಮಾರ್ ಈ ಜೋಡಿಯನ್ನು ಬೇರ್ಪಡಿಸಿದರು.

17ನೇ ಓವರ್ ನಲ್ಲಿ ರಿಝ್ವಾನ್ ವಿಕೆಟ್ ಅನ್ನು ಕಬಳಿಸಿದ ಹಾರ್ದಿಕ ಪಾಂಡ್ಯ ಪಾಕ್ ಗೆ ಆಘಾತ ನೀಡಿದರು. ಖುಷ್ ದಿಲ್ ಶಾ 14 ಹಾಗೂ ಆಸಿಫ್ ಅಲಿ 16 ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸಿದರು.

ಬೌಲಿಂಗ್ ನಲ್ಲಿ ಭಾರತದ ಪರ ಭುವನೇಶ್ವರ್, ಬಿಷ್ಣೋಯಿ, ಹಾರ್ದಿಕ್ ಪಾಂಡ್ಯ, ಯದುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ  ಅರ್ಧ ಶತಕ (60 ರನ್ 44 ಎಸೆತ) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.

andolanait

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

9 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

9 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

10 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

11 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

11 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

12 hours ago