ಕ್ರೀಡೆ

WTC ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತಂಡಕ್ಕೆ ಸಂದ ಜಯ ಟೀಂ ಇಂಡಿಯಾಗೆ ವರದಾನವಾಗಿ ಪರಿಣಮಿಸಿದೆ. ಹೀನಾಯ ಸೋಲು ಅನುಭವಿಸಿದ ನ್ಯೂಜಿಲೆಂಡ್‌ WTC (world test championship) 2023-25 ಟೂರ್ನಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದೆ.

ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನ್ಯೂಜಿಲೆಂಡ್‌ ಕುಸಿತ ಕಂಡರೆ, ಎರಡನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಮತ್ತು ಕಿವೀಸ್‌ ವಿರುದ್ಧ ಜಯ ದಾಖಲಿಸಿದ ಆಸೀಸ್‌ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.

ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿದ್ದು, 5 ಗೆಲುವು, 2 ಸೋಲು ಹಾಗೂ 1 ಡ್ರಾ ನೊಂದಿಗೆ ಒಟ್ಟು 62 ಪಾಯಿಂಟ್ಸ್​ ಕಲೆಹಾಕಿ ಅಗ್ರಸ್ಥಾನ ಅಲಂಕರಿಸಿದೆ.

ನ್ಯೂಝಿಲೆಂಡ್ ಈವರೆಗೆ ಆಡಿದ 5 ಪಂದ್ಯಗಳಲ್ಲಿ 3ರಲ್ಲಿ ಜಯ ಸಾಧಿಸಿದೆ. ಹಾಗೆಯೇ 2 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ ತಂಡ 11 ಪಂದ್ಯಗಳ ಪೈಕಿ 7 ಜಯ, 3 ಸೋಲು ಹಾಗೂ 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಸದ್ಯ 59.09% ಗೆಲುವಿನ ಶೇಕಡಾವಾರು ಹೊಂದಿದ್ದು 3ನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ ಕೇವಲ 2 ಪಂದ್ಯಗಳನ್ನಾಡಿದ್ದು, 1 ಪಂದ್ಯದಲ್ಲಿ ಗೆದ್ದರೆ, ಮತ್ತೊಂದು ಪಂದ್ಯ ಸೋತಿದೆ. ಈ ಮೂಲಕ 50.00% ಗೆಲುವಿನ ಶೇಕಡಾವಾರಿನೊಂದಿಗೆ 4ನೇ ಸ್ಥಾನದಲ್ಲಿದೆ.

ಪಾಕಿಸ್ತಾನ ಇದುವರೆಗೆ 5 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಗೆಲುವು, 3 ಪಂದ್ಯಗಳಲ್ಲಿ ಸೋಲನುಭವಿಸಿ 5ನೇ ಸ್ಥಾನದಲ್ಲಿದೆ.

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

48 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

58 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago