ಕ್ರೀಡೆ

WTC ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತಂಡಕ್ಕೆ ಸಂದ ಜಯ ಟೀಂ ಇಂಡಿಯಾಗೆ ವರದಾನವಾಗಿ ಪರಿಣಮಿಸಿದೆ. ಹೀನಾಯ ಸೋಲು ಅನುಭವಿಸಿದ ನ್ಯೂಜಿಲೆಂಡ್‌ WTC (world test championship) 2023-25 ಟೂರ್ನಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದೆ.

ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನ್ಯೂಜಿಲೆಂಡ್‌ ಕುಸಿತ ಕಂಡರೆ, ಎರಡನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಮತ್ತು ಕಿವೀಸ್‌ ವಿರುದ್ಧ ಜಯ ದಾಖಲಿಸಿದ ಆಸೀಸ್‌ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.

ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿದ್ದು, 5 ಗೆಲುವು, 2 ಸೋಲು ಹಾಗೂ 1 ಡ್ರಾ ನೊಂದಿಗೆ ಒಟ್ಟು 62 ಪಾಯಿಂಟ್ಸ್​ ಕಲೆಹಾಕಿ ಅಗ್ರಸ್ಥಾನ ಅಲಂಕರಿಸಿದೆ.

ನ್ಯೂಝಿಲೆಂಡ್ ಈವರೆಗೆ ಆಡಿದ 5 ಪಂದ್ಯಗಳಲ್ಲಿ 3ರಲ್ಲಿ ಜಯ ಸಾಧಿಸಿದೆ. ಹಾಗೆಯೇ 2 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ ತಂಡ 11 ಪಂದ್ಯಗಳ ಪೈಕಿ 7 ಜಯ, 3 ಸೋಲು ಹಾಗೂ 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಸದ್ಯ 59.09% ಗೆಲುವಿನ ಶೇಕಡಾವಾರು ಹೊಂದಿದ್ದು 3ನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ ಕೇವಲ 2 ಪಂದ್ಯಗಳನ್ನಾಡಿದ್ದು, 1 ಪಂದ್ಯದಲ್ಲಿ ಗೆದ್ದರೆ, ಮತ್ತೊಂದು ಪಂದ್ಯ ಸೋತಿದೆ. ಈ ಮೂಲಕ 50.00% ಗೆಲುವಿನ ಶೇಕಡಾವಾರಿನೊಂದಿಗೆ 4ನೇ ಸ್ಥಾನದಲ್ಲಿದೆ.

ಪಾಕಿಸ್ತಾನ ಇದುವರೆಗೆ 5 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಗೆಲುವು, 3 ಪಂದ್ಯಗಳಲ್ಲಿ ಸೋಲನುಭವಿಸಿ 5ನೇ ಸ್ಥಾನದಲ್ಲಿದೆ.

andolana

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago