ಕ್ರೀಡೆ

WTC ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತಂಡಕ್ಕೆ ಸಂದ ಜಯ ಟೀಂ ಇಂಡಿಯಾಗೆ ವರದಾನವಾಗಿ ಪರಿಣಮಿಸಿದೆ. ಹೀನಾಯ ಸೋಲು ಅನುಭವಿಸಿದ ನ್ಯೂಜಿಲೆಂಡ್‌ WTC (world test championship) 2023-25 ಟೂರ್ನಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದೆ.

ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನ್ಯೂಜಿಲೆಂಡ್‌ ಕುಸಿತ ಕಂಡರೆ, ಎರಡನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಮತ್ತು ಕಿವೀಸ್‌ ವಿರುದ್ಧ ಜಯ ದಾಖಲಿಸಿದ ಆಸೀಸ್‌ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ.

ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿದ್ದು, 5 ಗೆಲುವು, 2 ಸೋಲು ಹಾಗೂ 1 ಡ್ರಾ ನೊಂದಿಗೆ ಒಟ್ಟು 62 ಪಾಯಿಂಟ್ಸ್​ ಕಲೆಹಾಕಿ ಅಗ್ರಸ್ಥಾನ ಅಲಂಕರಿಸಿದೆ.

ನ್ಯೂಝಿಲೆಂಡ್ ಈವರೆಗೆ ಆಡಿದ 5 ಪಂದ್ಯಗಳಲ್ಲಿ 3ರಲ್ಲಿ ಜಯ ಸಾಧಿಸಿದೆ. ಹಾಗೆಯೇ 2 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ ತಂಡ 11 ಪಂದ್ಯಗಳ ಪೈಕಿ 7 ಜಯ, 3 ಸೋಲು ಹಾಗೂ 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಸದ್ಯ 59.09% ಗೆಲುವಿನ ಶೇಕಡಾವಾರು ಹೊಂದಿದ್ದು 3ನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ ಕೇವಲ 2 ಪಂದ್ಯಗಳನ್ನಾಡಿದ್ದು, 1 ಪಂದ್ಯದಲ್ಲಿ ಗೆದ್ದರೆ, ಮತ್ತೊಂದು ಪಂದ್ಯ ಸೋತಿದೆ. ಈ ಮೂಲಕ 50.00% ಗೆಲುವಿನ ಶೇಕಡಾವಾರಿನೊಂದಿಗೆ 4ನೇ ಸ್ಥಾನದಲ್ಲಿದೆ.

ಪಾಕಿಸ್ತಾನ ಇದುವರೆಗೆ 5 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಗೆಲುವು, 3 ಪಂದ್ಯಗಳಲ್ಲಿ ಸೋಲನುಭವಿಸಿ 5ನೇ ಸ್ಥಾನದಲ್ಲಿದೆ.

andolana

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

9 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

11 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

11 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

12 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

12 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

13 hours ago