ಕ್ರೀಡೆ

ಆಸ್ಟ್ರೇಲಿಯಾಗೆ 235 ರನ್‌ಗಳ ಬೃಹತ್‌ ಗುರಿ ನೀಡಿದ ಭಾರತ

ತಿರುವನಂತಪುರಂ : ಜೈಸ್ವಾಲ್‌, ಗಾಯಕ್ವಾಡ್‌ ಮತ್ತು ಇಶಾನ್‌ ಕಿಸಾನ್‌ ಆವರ ಅಮೊಘ ಅರ್ಧ ಶತಕ ಬಲದಿಂದ ಭಾರತ ತಂಡ ಆಸೀಸ್‌ಗೆ ಕಠಿಣ ಗುರಿ ನೀಡಿದೆ.

ಇಲ್ಲಿನ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್‌ ಬ್ಯಾಟಿಂಗ್‌ ಮಾಡಿ 4 ವಿಕೆಟ್‌ ಕಳೆದಕೊಂಡು 235 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಸೂರ್ಯಕುಮಾರ್‌ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್‌ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಪವರ್‌ ಪ್ಲೇ ಒಳಗಡೆಯೇ 77 ರನ್‌ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್‌ 9 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 53 ರನ್‌ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 58 ರನ್‌ ಕಲೆಹಾಕಿದರು. ಪವರ್‌ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್‌ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್‌ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ ಮೂಲಕ 52 ರನ್‌ ಬಾರಿಸಿದರು.

ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್‌ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 31 ರನ್‌ ಗಳಿಸಿದರು.

ಆಸೀಸ್‌ ಪರ ನಥನ್‌ ಏಲಿಸ್‌ 4-45-3, ಸ್ಟೋಯ್ನಿಸ್‌ 3-27-1 ವಿಕೆಟ್‌ ಪಡೆದರು.

andolanait

Recent Posts

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

19 mins ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

22 mins ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

25 mins ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

3 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

3 hours ago