ಕ್ರೀಡೆ

ಆಸ್ಟ್ರೇಲಿಯಾಗೆ 235 ರನ್‌ಗಳ ಬೃಹತ್‌ ಗುರಿ ನೀಡಿದ ಭಾರತ

ತಿರುವನಂತಪುರಂ : ಜೈಸ್ವಾಲ್‌, ಗಾಯಕ್ವಾಡ್‌ ಮತ್ತು ಇಶಾನ್‌ ಕಿಸಾನ್‌ ಆವರ ಅಮೊಘ ಅರ್ಧ ಶತಕ ಬಲದಿಂದ ಭಾರತ ತಂಡ ಆಸೀಸ್‌ಗೆ ಕಠಿಣ ಗುರಿ ನೀಡಿದೆ.

ಇಲ್ಲಿನ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್‌ ಬ್ಯಾಟಿಂಗ್‌ ಮಾಡಿ 4 ವಿಕೆಟ್‌ ಕಳೆದಕೊಂಡು 235 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಸೂರ್ಯಕುಮಾರ್‌ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್‌ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಪವರ್‌ ಪ್ಲೇ ಒಳಗಡೆಯೇ 77 ರನ್‌ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್‌ 9 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 53 ರನ್‌ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 58 ರನ್‌ ಕಲೆಹಾಕಿದರು. ಪವರ್‌ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್‌ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್‌ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ ಮೂಲಕ 52 ರನ್‌ ಬಾರಿಸಿದರು.

ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್‌ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 31 ರನ್‌ ಗಳಿಸಿದರು.

ಆಸೀಸ್‌ ಪರ ನಥನ್‌ ಏಲಿಸ್‌ 4-45-3, ಸ್ಟೋಯ್ನಿಸ್‌ 3-27-1 ವಿಕೆಟ್‌ ಪಡೆದರು.

andolanait

Recent Posts

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

4 mins ago

ಹೊಸ ವರ್ಷದ ಸಂಭ್ರಮ: ದೇಗುಲಗಳತ್ತ ಭಕ್ತರ ದಂಡು

ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…

23 mins ago

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

3 hours ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

3 hours ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

3 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

4 hours ago