ಕ್ರೀಡೆ

ಆಸ್ಟ್ರೇಲಿಯಾಗೆ 235 ರನ್‌ಗಳ ಬೃಹತ್‌ ಗುರಿ ನೀಡಿದ ಭಾರತ

ತಿರುವನಂತಪುರಂ : ಜೈಸ್ವಾಲ್‌, ಗಾಯಕ್ವಾಡ್‌ ಮತ್ತು ಇಶಾನ್‌ ಕಿಸಾನ್‌ ಆವರ ಅಮೊಘ ಅರ್ಧ ಶತಕ ಬಲದಿಂದ ಭಾರತ ತಂಡ ಆಸೀಸ್‌ಗೆ ಕಠಿಣ ಗುರಿ ನೀಡಿದೆ.

ಇಲ್ಲಿನ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್‌ ಬ್ಯಾಟಿಂಗ್‌ ಮಾಡಿ 4 ವಿಕೆಟ್‌ ಕಳೆದಕೊಂಡು 235 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಸೂರ್ಯಕುಮಾರ್‌ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್‌ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಪವರ್‌ ಪ್ಲೇ ಒಳಗಡೆಯೇ 77 ರನ್‌ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್‌ 9 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 53 ರನ್‌ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 58 ರನ್‌ ಕಲೆಹಾಕಿದರು. ಪವರ್‌ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್‌ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್‌ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ ಮೂಲಕ 52 ರನ್‌ ಬಾರಿಸಿದರು.

ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್‌ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 31 ರನ್‌ ಗಳಿಸಿದರು.

ಆಸೀಸ್‌ ಪರ ನಥನ್‌ ಏಲಿಸ್‌ 4-45-3, ಸ್ಟೋಯ್ನಿಸ್‌ 3-27-1 ವಿಕೆಟ್‌ ಪಡೆದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago