ಕ್ರೀಡೆ

ಆಸ್ಟ್ರೇಲಿಯಾಗೆ 235 ರನ್‌ಗಳ ಬೃಹತ್‌ ಗುರಿ ನೀಡಿದ ಭಾರತ

ತಿರುವನಂತಪುರಂ : ಜೈಸ್ವಾಲ್‌, ಗಾಯಕ್ವಾಡ್‌ ಮತ್ತು ಇಶಾನ್‌ ಕಿಸಾನ್‌ ಆವರ ಅಮೊಘ ಅರ್ಧ ಶತಕ ಬಲದಿಂದ ಭಾರತ ತಂಡ ಆಸೀಸ್‌ಗೆ ಕಠಿಣ ಗುರಿ ನೀಡಿದೆ.

ಇಲ್ಲಿನ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್‌ ಬ್ಯಾಟಿಂಗ್‌ ಮಾಡಿ 4 ವಿಕೆಟ್‌ ಕಳೆದಕೊಂಡು 235 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಸೂರ್ಯಕುಮಾರ್‌ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್‌ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಪವರ್‌ ಪ್ಲೇ ಒಳಗಡೆಯೇ 77 ರನ್‌ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್‌ 9 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 53 ರನ್‌ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 58 ರನ್‌ ಕಲೆಹಾಕಿದರು. ಪವರ್‌ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್‌ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್‌ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ ಮೂಲಕ 52 ರನ್‌ ಬಾರಿಸಿದರು.

ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್‌ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 31 ರನ್‌ ಗಳಿಸಿದರು.

ಆಸೀಸ್‌ ಪರ ನಥನ್‌ ಏಲಿಸ್‌ 4-45-3, ಸ್ಟೋಯ್ನಿಸ್‌ 3-27-1 ವಿಕೆಟ್‌ ಪಡೆದರು.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

12 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

12 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

17 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago