ಕ್ರೀಡೆ

ಆಸ್ಟ್ರೇಲಿಯಾಗೆ 235 ರನ್‌ಗಳ ಬೃಹತ್‌ ಗುರಿ ನೀಡಿದ ಭಾರತ

ತಿರುವನಂತಪುರಂ : ಜೈಸ್ವಾಲ್‌, ಗಾಯಕ್ವಾಡ್‌ ಮತ್ತು ಇಶಾನ್‌ ಕಿಸಾನ್‌ ಆವರ ಅಮೊಘ ಅರ್ಧ ಶತಕ ಬಲದಿಂದ ಭಾರತ ತಂಡ ಆಸೀಸ್‌ಗೆ ಕಠಿಣ ಗುರಿ ನೀಡಿದೆ.

ಇಲ್ಲಿನ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್‌ ಬ್ಯಾಟಿಂಗ್‌ ಮಾಡಿ 4 ವಿಕೆಟ್‌ ಕಳೆದಕೊಂಡು 235 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಸೂರ್ಯಕುಮಾರ್‌ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್‌ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಪವರ್‌ ಪ್ಲೇ ಒಳಗಡೆಯೇ 77 ರನ್‌ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್‌ 9 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 53 ರನ್‌ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 58 ರನ್‌ ಕಲೆಹಾಕಿದರು. ಪವರ್‌ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್‌ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್‌ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ ಮೂಲಕ 52 ರನ್‌ ಬಾರಿಸಿದರು.

ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್‌ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 31 ರನ್‌ ಗಳಿಸಿದರು.

ಆಸೀಸ್‌ ಪರ ನಥನ್‌ ಏಲಿಸ್‌ 4-45-3, ಸ್ಟೋಯ್ನಿಸ್‌ 3-27-1 ವಿಕೆಟ್‌ ಪಡೆದರು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

9 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

9 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

10 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

10 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

11 hours ago