ಕ್ರೀಡೆ

ಟೀಂ ಇಂಡಿಯಾ-ಸೌಥ್‌ ಆಫ್ರಿಕಾ ನಡುವಣ ಟಿ20 ಸರಣಿ ವೇಳಾಪಟ್ಟಿ ಪ್ರಕಟ!

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್‌ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ.

ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ನಂತರ ತವರಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಹಾಗೂ ಟಿ20 ಸರಣಿ ಆಡಲಿದೆ. ಇದರ ಬೆನ್ನಲ್ಲೇ ನ್ಯೂಜಿಲೆಂಡ್‌ ಪ್ರವಾಸ ಆರಂಭವಾಗಲಿದ್ದು, ಇದಾದ ಬಳಿಕ ಟೀಮ ಇಂಡಿಯಾ ಹರಿಣಗಳ ಬೇಟೆಗಾಗಿ ಆಫ್ರಿಕಾಗೆ ಪ್ರವಾಸ ಮಾಡಲಿದೆ.

ಟೀಮ್‌ ಇಂಡಿಯಾ ವೇಳಾಪಟ್ಟಿ: ಭಾರತ ತಂಡ ವಿಶ್ವಕಪ್‌ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ನವೆಂಬರ್‌ 8ರಿಂದ ಆರಂಭವಾಗಲಿರುವ ಸರಣಿ ನವೆಂಬರ್‌ 15ಕ್ಕೆ ಕೊನೆಯಾಗಲಿದೆ.

ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ

ನವೆಂಬರ್‌. 8: ಮೊದಲ ಟಿ20- ಕಿಂಗ್ಸ್‌ಮೀಡ್‌ ಸ್ಟೇಡಿಯಂ, ಡರ್ಬನ್‌

ನವೆಂಬರ್‌. 10: ಎರಡನೇ ಟಿ20- ಸೇಂಟ್‌ ಜಾರ್ಜ್‌ ಪಾರ್ಕ್‌ ಸ್ಟೇಡಿಯಂ, ಗ್ಕೆಬರ್ಹಾ

ನವೆಂಬರ್‌. 13: ಮೂರನೇ ಟಿ20- ಸೂಪರ್‌ಸೋರ್ಟ್‌ ಪಾರ್ಕ್‌, ಸೆಂಚೂರಿಯನ್‌

ನವೆಂಬರ್‌. 15: ನಾಲ್ಕನೇ ಟಿ20- ದಿ ವಾಂಡರರ್ಸ್‌ ಸ್ಟೇಡಿಯಂ, ಜೋಹಾನ್ಸ್‌ಬರ್ಗ್‌

ಕಳೆದ ವರ್ಷ ದ್ವಿಪಕ್ಷೀಯ ಸರಣಿಯಲ್ಲಿ ಮೂರು ಮಾದರಿಯ ಪಂದ್ಯಾವಳಿಯಲ್ಲಿ ಟಿ20 ಪಂದ್ಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತ್ತು. ಇನ್ನು ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳನ್ನು 2-1 ಅಂತರದಿಂದ ರೋಚಕವಾಗಿ ಸೋಲಿಸಿತ್ತು. ಇನ್ನು ಎರಡು ಟೆಸ್ಟ್‌ ಪಂದ್ಯದಲ್ಲಿ ಇತ್ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದವು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

11 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

44 mins ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

1 hour ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

5 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago