ಕ್ರೀಡೆ

ಟೀಂ ಇಂಡಿಯಾ-ಸೌಥ್‌ ಆಫ್ರಿಕಾ ನಡುವಣ ಟಿ20 ಸರಣಿ ವೇಳಾಪಟ್ಟಿ ಪ್ರಕಟ!

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್‌ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ.

ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ನಂತರ ತವರಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಹಾಗೂ ಟಿ20 ಸರಣಿ ಆಡಲಿದೆ. ಇದರ ಬೆನ್ನಲ್ಲೇ ನ್ಯೂಜಿಲೆಂಡ್‌ ಪ್ರವಾಸ ಆರಂಭವಾಗಲಿದ್ದು, ಇದಾದ ಬಳಿಕ ಟೀಮ ಇಂಡಿಯಾ ಹರಿಣಗಳ ಬೇಟೆಗಾಗಿ ಆಫ್ರಿಕಾಗೆ ಪ್ರವಾಸ ಮಾಡಲಿದೆ.

ಟೀಮ್‌ ಇಂಡಿಯಾ ವೇಳಾಪಟ್ಟಿ: ಭಾರತ ತಂಡ ವಿಶ್ವಕಪ್‌ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ನವೆಂಬರ್‌ 8ರಿಂದ ಆರಂಭವಾಗಲಿರುವ ಸರಣಿ ನವೆಂಬರ್‌ 15ಕ್ಕೆ ಕೊನೆಯಾಗಲಿದೆ.

ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ

ನವೆಂಬರ್‌. 8: ಮೊದಲ ಟಿ20- ಕಿಂಗ್ಸ್‌ಮೀಡ್‌ ಸ್ಟೇಡಿಯಂ, ಡರ್ಬನ್‌

ನವೆಂಬರ್‌. 10: ಎರಡನೇ ಟಿ20- ಸೇಂಟ್‌ ಜಾರ್ಜ್‌ ಪಾರ್ಕ್‌ ಸ್ಟೇಡಿಯಂ, ಗ್ಕೆಬರ್ಹಾ

ನವೆಂಬರ್‌. 13: ಮೂರನೇ ಟಿ20- ಸೂಪರ್‌ಸೋರ್ಟ್‌ ಪಾರ್ಕ್‌, ಸೆಂಚೂರಿಯನ್‌

ನವೆಂಬರ್‌. 15: ನಾಲ್ಕನೇ ಟಿ20- ದಿ ವಾಂಡರರ್ಸ್‌ ಸ್ಟೇಡಿಯಂ, ಜೋಹಾನ್ಸ್‌ಬರ್ಗ್‌

ಕಳೆದ ವರ್ಷ ದ್ವಿಪಕ್ಷೀಯ ಸರಣಿಯಲ್ಲಿ ಮೂರು ಮಾದರಿಯ ಪಂದ್ಯಾವಳಿಯಲ್ಲಿ ಟಿ20 ಪಂದ್ಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತ್ತು. ಇನ್ನು ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳನ್ನು 2-1 ಅಂತರದಿಂದ ರೋಚಕವಾಗಿ ಸೋಲಿಸಿತ್ತು. ಇನ್ನು ಎರಡು ಟೆಸ್ಟ್‌ ಪಂದ್ಯದಲ್ಲಿ ಇತ್ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದವು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

16 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

21 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

26 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

30 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

33 mins ago