ಕ್ರೀಡೆ

ಟೀಂ ಇಂಡಿಯಾ-ಸೌಥ್‌ ಆಫ್ರಿಕಾ ನಡುವಣ ಟಿ20 ಸರಣಿ ವೇಳಾಪಟ್ಟಿ ಪ್ರಕಟ!

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್‌ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ.

ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ನಂತರ ತವರಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಹಾಗೂ ಟಿ20 ಸರಣಿ ಆಡಲಿದೆ. ಇದರ ಬೆನ್ನಲ್ಲೇ ನ್ಯೂಜಿಲೆಂಡ್‌ ಪ್ರವಾಸ ಆರಂಭವಾಗಲಿದ್ದು, ಇದಾದ ಬಳಿಕ ಟೀಮ ಇಂಡಿಯಾ ಹರಿಣಗಳ ಬೇಟೆಗಾಗಿ ಆಫ್ರಿಕಾಗೆ ಪ್ರವಾಸ ಮಾಡಲಿದೆ.

ಟೀಮ್‌ ಇಂಡಿಯಾ ವೇಳಾಪಟ್ಟಿ: ಭಾರತ ತಂಡ ವಿಶ್ವಕಪ್‌ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ನವೆಂಬರ್‌ 8ರಿಂದ ಆರಂಭವಾಗಲಿರುವ ಸರಣಿ ನವೆಂಬರ್‌ 15ಕ್ಕೆ ಕೊನೆಯಾಗಲಿದೆ.

ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ

ನವೆಂಬರ್‌. 8: ಮೊದಲ ಟಿ20- ಕಿಂಗ್ಸ್‌ಮೀಡ್‌ ಸ್ಟೇಡಿಯಂ, ಡರ್ಬನ್‌

ನವೆಂಬರ್‌. 10: ಎರಡನೇ ಟಿ20- ಸೇಂಟ್‌ ಜಾರ್ಜ್‌ ಪಾರ್ಕ್‌ ಸ್ಟೇಡಿಯಂ, ಗ್ಕೆಬರ್ಹಾ

ನವೆಂಬರ್‌. 13: ಮೂರನೇ ಟಿ20- ಸೂಪರ್‌ಸೋರ್ಟ್‌ ಪಾರ್ಕ್‌, ಸೆಂಚೂರಿಯನ್‌

ನವೆಂಬರ್‌. 15: ನಾಲ್ಕನೇ ಟಿ20- ದಿ ವಾಂಡರರ್ಸ್‌ ಸ್ಟೇಡಿಯಂ, ಜೋಹಾನ್ಸ್‌ಬರ್ಗ್‌

ಕಳೆದ ವರ್ಷ ದ್ವಿಪಕ್ಷೀಯ ಸರಣಿಯಲ್ಲಿ ಮೂರು ಮಾದರಿಯ ಪಂದ್ಯಾವಳಿಯಲ್ಲಿ ಟಿ20 ಪಂದ್ಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತ್ತು. ಇನ್ನು ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳನ್ನು 2-1 ಅಂತರದಿಂದ ರೋಚಕವಾಗಿ ಸೋಲಿಸಿತ್ತು. ಇನ್ನು ಎರಡು ಟೆಸ್ಟ್‌ ಪಂದ್ಯದಲ್ಲಿ ಇತ್ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದವು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

2 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

3 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

4 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

9 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago