ಕ್ರೀಡೆ

ಟೀಂ ಇಂಡಿಯಾ-ಸೌಥ್‌ ಆಫ್ರಿಕಾ ನಡುವಣ ಟಿ20 ಸರಣಿ ವೇಳಾಪಟ್ಟಿ ಪ್ರಕಟ!

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್‌ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ.

ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ನಂತರ ತವರಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಹಾಗೂ ಟಿ20 ಸರಣಿ ಆಡಲಿದೆ. ಇದರ ಬೆನ್ನಲ್ಲೇ ನ್ಯೂಜಿಲೆಂಡ್‌ ಪ್ರವಾಸ ಆರಂಭವಾಗಲಿದ್ದು, ಇದಾದ ಬಳಿಕ ಟೀಮ ಇಂಡಿಯಾ ಹರಿಣಗಳ ಬೇಟೆಗಾಗಿ ಆಫ್ರಿಕಾಗೆ ಪ್ರವಾಸ ಮಾಡಲಿದೆ.

ಟೀಮ್‌ ಇಂಡಿಯಾ ವೇಳಾಪಟ್ಟಿ: ಭಾರತ ತಂಡ ವಿಶ್ವಕಪ್‌ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ನವೆಂಬರ್‌ 8ರಿಂದ ಆರಂಭವಾಗಲಿರುವ ಸರಣಿ ನವೆಂಬರ್‌ 15ಕ್ಕೆ ಕೊನೆಯಾಗಲಿದೆ.

ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ

ನವೆಂಬರ್‌. 8: ಮೊದಲ ಟಿ20- ಕಿಂಗ್ಸ್‌ಮೀಡ್‌ ಸ್ಟೇಡಿಯಂ, ಡರ್ಬನ್‌

ನವೆಂಬರ್‌. 10: ಎರಡನೇ ಟಿ20- ಸೇಂಟ್‌ ಜಾರ್ಜ್‌ ಪಾರ್ಕ್‌ ಸ್ಟೇಡಿಯಂ, ಗ್ಕೆಬರ್ಹಾ

ನವೆಂಬರ್‌. 13: ಮೂರನೇ ಟಿ20- ಸೂಪರ್‌ಸೋರ್ಟ್‌ ಪಾರ್ಕ್‌, ಸೆಂಚೂರಿಯನ್‌

ನವೆಂಬರ್‌. 15: ನಾಲ್ಕನೇ ಟಿ20- ದಿ ವಾಂಡರರ್ಸ್‌ ಸ್ಟೇಡಿಯಂ, ಜೋಹಾನ್ಸ್‌ಬರ್ಗ್‌

ಕಳೆದ ವರ್ಷ ದ್ವಿಪಕ್ಷೀಯ ಸರಣಿಯಲ್ಲಿ ಮೂರು ಮಾದರಿಯ ಪಂದ್ಯಾವಳಿಯಲ್ಲಿ ಟಿ20 ಪಂದ್ಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತ್ತು. ಇನ್ನು ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳನ್ನು 2-1 ಅಂತರದಿಂದ ರೋಚಕವಾಗಿ ಸೋಲಿಸಿತ್ತು. ಇನ್ನು ಎರಡು ಟೆಸ್ಟ್‌ ಪಂದ್ಯದಲ್ಲಿ ಇತ್ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದವು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago