ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ.
ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ನಂತರ ತವರಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಹಾಗೂ ಟಿ20 ಸರಣಿ ಆಡಲಿದೆ. ಇದರ ಬೆನ್ನಲ್ಲೇ ನ್ಯೂಜಿಲೆಂಡ್ ಪ್ರವಾಸ ಆರಂಭವಾಗಲಿದ್ದು, ಇದಾದ ಬಳಿಕ ಟೀಮ ಇಂಡಿಯಾ ಹರಿಣಗಳ ಬೇಟೆಗಾಗಿ ಆಫ್ರಿಕಾಗೆ ಪ್ರವಾಸ ಮಾಡಲಿದೆ.
ಟೀಮ್ ಇಂಡಿಯಾ ವೇಳಾಪಟ್ಟಿ: ಭಾರತ ತಂಡ ವಿಶ್ವಕಪ್ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ನವೆಂಬರ್ 8ರಿಂದ ಆರಂಭವಾಗಲಿರುವ ಸರಣಿ ನವೆಂಬರ್ 15ಕ್ಕೆ ಕೊನೆಯಾಗಲಿದೆ.
ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ
ನವೆಂಬರ್. 8: ಮೊದಲ ಟಿ20- ಕಿಂಗ್ಸ್ಮೀಡ್ ಸ್ಟೇಡಿಯಂ, ಡರ್ಬನ್
ನವೆಂಬರ್. 10: ಎರಡನೇ ಟಿ20- ಸೇಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂ, ಗ್ಕೆಬರ್ಹಾ
ನವೆಂಬರ್. 13: ಮೂರನೇ ಟಿ20- ಸೂಪರ್ಸೋರ್ಟ್ ಪಾರ್ಕ್, ಸೆಂಚೂರಿಯನ್
ನವೆಂಬರ್. 15: ನಾಲ್ಕನೇ ಟಿ20- ದಿ ವಾಂಡರರ್ಸ್ ಸ್ಟೇಡಿಯಂ, ಜೋಹಾನ್ಸ್ಬರ್ಗ್
ಕಳೆದ ವರ್ಷ ದ್ವಿಪಕ್ಷೀಯ ಸರಣಿಯಲ್ಲಿ ಮೂರು ಮಾದರಿಯ ಪಂದ್ಯಾವಳಿಯಲ್ಲಿ ಟಿ20 ಪಂದ್ಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತ್ತು. ಇನ್ನು ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳನ್ನು 2-1 ಅಂತರದಿಂದ ರೋಚಕವಾಗಿ ಸೋಲಿಸಿತ್ತು. ಇನ್ನು ಎರಡು ಟೆಸ್ಟ್ ಪಂದ್ಯದಲ್ಲಿ ಇತ್ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದವು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…