ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕ್ಯಾಂಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜೊತೆಯಾಗಿ ತಂಡವನ್ನು ಹೆಸರಿಸಿದ್ದಾರೆ. ಕೆಎಲ್ ರಾಹುಲ್ ಭಾರತ ತಂಡದ ಪ್ರಮುಖ ವಿಕೆಟ್-ಕೀಪರ್ ಬ್ಯಾಟರ್ ಆಗಿ ಆಯ್ಕೆ ಆಗಿದ್ದು, ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ.
ಏಷ್ಯಾಕಪ್ 2023 ಕ್ಕಾಗಿ ಪ್ರಸ್ತುತ ಶ್ರೀಲಂಕಾದಲ್ಲಿರುವ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಭಾರತ ತಂಡದ ವಿಶ್ವಕಪ್ ಪಟ್ಟಿಯಿಂದ ಹೊರಗುಳಿದಿದ್ದಾರೆ. ಭರ್ಜರಿ ಫಾರ್ಮ್ನಲ್ಲಿರುವ ಇಶಾನ್ ಕಿಶನ್ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ.ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ವಾಷಿಂಗ್ಟನ್ ಸುಂದರ್ ಮತ್ತು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಬ್ಬರನ್ನೂ ಕೈಬಿಡಲಾಗಿದೆ. ಆಲ್ರೌಂಡರ್ಗಳಾದ ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.
ಕೆಎಲ್ ರಾಹುಲ್ ಫಿಟ್ ಆಗಿದ್ದಾರೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಅಗರ್ಕರ್ ಹೇಳಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೂ ಸಂಪೂರ್ಣ ಫಿಟ್ ಇಲ್ಲದ ಕಾರಣ ಏಷ್ಯಾಕಪ್ನ ಮೊದಲ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ.ಇದೀಗ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿರುವ ರಾಹುಲ್ ಮುಂದಿನ ಪಂದ್ಯಕ್ಕೆ ಲಭ್ಯರಾಗಿ ವಿಶ್ವಕಪ್ಗೆ ತಯಾರಾಗಲಿದ್ದಾರೆ.
ಇನ್ನು ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಅದ್ಭುತ ಫಾರ್ಮ್ನಲ್ಲಿ ಇಲ್ಲದಿದ್ದರೂ ಇವರನ್ನು ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಇರುವ ಕಾರಣ ಸೂರ್ಯಕುಮಾರ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಗುವುದು ಅನುಮಾನ. ಸ್ಪಿನ್ ವಿಭಾಗದಲ್ಲಿ ರವೀಂದ್ರ ಜಡೇಜಾ ಭಾರತದ ಮೊದಲ ಆಯ್ಕೆಯಾಗಿದ್ದು, ಯುಜ್ವೇಂದ್ರ ಚಹಲ್ ಅವರನ್ನು ಪರಿಗಣಿಸಿಲ್ಲ. ಬದಲಾಗಿ ಕುಲ್ದೀಪ್ ಯಾದವ್ ಆಯ್ಕೆ ಆಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಇದ್ದಾರೆ. ವೇಗಿಗಳ ಸಾಲಿನಲ್ಲಿ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಇದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…