ನವದೆಹಲಿ : ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತವನ್ನು ಉದಯ್ ಸಹರಾನ್ ಅವರು ನಾಯಕನಾಗಿ ಮುನ್ನಡೆಸಲಿದ್ದಾರೆ. ಸೌಮಿ ಕುಮಾರ್ ಪಾಂಡೆಯನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಂಡರ್ -19 ಏಷ್ಯಾಕಪ್ನಲ್ಲಿ ಭಾರತ ಈವರೆಗೆ ಎಂಟು ಬಾರಿ ಪ್ರಶಸ್ತಿ ಗೆದ್ದು, ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ.
ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳದ ಸವಾಲನ್ನು ಎದುರಿಸಲಿದೆ. ಡಿಸೆಂಬರ್ 8 ರಂದು ಐಸಿಸಿ ಅಕಾಡೆಮಿ ಓವಲ್-1 ನಲ್ಲಿ ಆಫ್ಘನ್ ವಿರುದ್ಧದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಲಿದೆ. ಡಿಸೆಂಬರ್ 10 ರಂದು ಪಾಕಿಸ್ತಾನವನ್ನು ಮತ್ತು ಡಿಸೆಂಬರ್ 12 ರಂದು ನೇಪಾಳವನ್ನು ಎದುರಿಸಲಿದೆ. ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಭಾರತ ತಂಡ ಇಂತಿದೆ: ಉದಯ್ ಸಹರಾನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್( ವಿಕೆಟ್ ಕೀಪರ್) ಎಂ ಅಭಿಷೇಕ್, ಇನ್ನೇಶ್ ಮಹಾಜನ್ (ವಾಕ್), ಆರಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…