ನವದೆಹಲಿ : ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತವನ್ನು ಉದಯ್ ಸಹರಾನ್ ಅವರು ನಾಯಕನಾಗಿ ಮುನ್ನಡೆಸಲಿದ್ದಾರೆ. ಸೌಮಿ ಕುಮಾರ್ ಪಾಂಡೆಯನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಂಡರ್ -19 ಏಷ್ಯಾಕಪ್ನಲ್ಲಿ ಭಾರತ ಈವರೆಗೆ ಎಂಟು ಬಾರಿ ಪ್ರಶಸ್ತಿ ಗೆದ್ದು, ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ.
ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳದ ಸವಾಲನ್ನು ಎದುರಿಸಲಿದೆ. ಡಿಸೆಂಬರ್ 8 ರಂದು ಐಸಿಸಿ ಅಕಾಡೆಮಿ ಓವಲ್-1 ನಲ್ಲಿ ಆಫ್ಘನ್ ವಿರುದ್ಧದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಲಿದೆ. ಡಿಸೆಂಬರ್ 10 ರಂದು ಪಾಕಿಸ್ತಾನವನ್ನು ಮತ್ತು ಡಿಸೆಂಬರ್ 12 ರಂದು ನೇಪಾಳವನ್ನು ಎದುರಿಸಲಿದೆ. ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಭಾರತ ತಂಡ ಇಂತಿದೆ: ಉದಯ್ ಸಹರಾನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್( ವಿಕೆಟ್ ಕೀಪರ್) ಎಂ ಅಭಿಷೇಕ್, ಇನ್ನೇಶ್ ಮಹಾಜನ್ (ವಾಕ್), ಆರಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…