ಕ್ರೀಡೆ

ಅಂಡರ್-19 ಏಷ್ಯಾಕಪ್‌ಕ್ಕೆ ಭಾರತ ತಂಡ ಪ್ರಕಟ: ನಾಯಕನಾಗಿ ಉದಯ್ ಸಹರಾನ್

ನವದೆಹಲಿ : ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತವನ್ನು ಉದಯ್ ಸಹರಾನ್ ಅವರು ನಾಯಕನಾಗಿ ಮುನ್ನಡೆಸಲಿದ್ದಾರೆ. ಸೌಮಿ ಕುಮಾರ್ ಪಾಂಡೆಯನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಂಡರ್ -19 ಏಷ್ಯಾಕಪ್‌ನಲ್ಲಿ ಭಾರತ ಈವರೆಗೆ ಎಂಟು ಬಾರಿ ಪ್ರಶಸ್ತಿ ಗೆದ್ದು, ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ.

ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳದ ಸವಾಲನ್ನು ಎದುರಿಸಲಿದೆ. ಡಿಸೆಂಬರ್ 8 ರಂದು ಐಸಿಸಿ ಅಕಾಡೆಮಿ ಓವಲ್-1 ನಲ್ಲಿ ಆಫ್ಘನ್ ವಿರುದ್ಧದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಲಿದೆ. ಡಿಸೆಂಬರ್ 10 ರಂದು ಪಾಕಿಸ್ತಾನವನ್ನು ಮತ್ತು ಡಿಸೆಂಬರ್ 12 ರಂದು ನೇಪಾಳವನ್ನು ಎದುರಿಸಲಿದೆ. ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಭಾರತ ತಂಡ ಇಂತಿದೆ: ಉದಯ್ ಸಹರಾನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್( ವಿಕೆಟ್ ಕೀಪರ್) ಎಂ ಅಭಿಷೇಕ್, ಇನ್ನೇಶ್ ಮಹಾಜನ್ (ವಾಕ್), ಆರಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

9 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

9 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

9 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

9 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

9 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

9 hours ago