ನವದೆಹಲಿ : ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತವನ್ನು ಉದಯ್ ಸಹರಾನ್ ಅವರು ನಾಯಕನಾಗಿ ಮುನ್ನಡೆಸಲಿದ್ದಾರೆ. ಸೌಮಿ ಕುಮಾರ್ ಪಾಂಡೆಯನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಂಡರ್ -19 ಏಷ್ಯಾಕಪ್ನಲ್ಲಿ ಭಾರತ ಈವರೆಗೆ ಎಂಟು ಬಾರಿ ಪ್ರಶಸ್ತಿ ಗೆದ್ದು, ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ.
ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳದ ಸವಾಲನ್ನು ಎದುರಿಸಲಿದೆ. ಡಿಸೆಂಬರ್ 8 ರಂದು ಐಸಿಸಿ ಅಕಾಡೆಮಿ ಓವಲ್-1 ನಲ್ಲಿ ಆಫ್ಘನ್ ವಿರುದ್ಧದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಲಿದೆ. ಡಿಸೆಂಬರ್ 10 ರಂದು ಪಾಕಿಸ್ತಾನವನ್ನು ಮತ್ತು ಡಿಸೆಂಬರ್ 12 ರಂದು ನೇಪಾಳವನ್ನು ಎದುರಿಸಲಿದೆ. ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಭಾರತ ತಂಡ ಇಂತಿದೆ: ಉದಯ್ ಸಹರಾನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್( ವಿಕೆಟ್ ಕೀಪರ್) ಎಂ ಅಭಿಷೇಕ್, ಇನ್ನೇಶ್ ಮಹಾಜನ್ (ವಾಕ್), ಆರಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…