ಕ್ರೀಡೆ

ಮ್ಯಾಕ್ಸ್‌ವೆಲ್‌ ಅಬ್ಬರದ ಶತಕದಾಟಕ್ಕೆ ಶರಣಾದ ಭಾರತ

ಗುವಾಹಟಿ : ಆಸ್ಟ್ರೇಲಿಯಾದ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ಅವರ ಅಬ್ಬರದ ಬ್ಯಾಟಿಂಗ್‌ ಮುಂದೆ ಮಂಕಾದ ಭಾರತ ತಂಡ 5 ವಿಕೆಟ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಸರಣಿಯಲ್ಲಿ 2-1 ಅಂತರದಲ್ಲಿ ಭಾರತ ಮುಂದಿದೆ.

ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 222ರನ್‌ಗಳ ಬೃಹತ್‌ ಮೊತ್ತ ಚೇಸ್‌ ಮಾಡಿದ ಆಸೀಸ್‌ 20 ಓವರ್‌ಗಳಲ್ಲಿ 225 ರನ್‌ ದಾಖಲಿಸಿದೆ. ಆ ಮೂಲಕ ಈ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿತು.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಭಾರತ ತಂಡ, ಆರಂಭದಲ್ಲಿಯೇ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್‌ ಕೇವಲ 6 ರನ್‌ ಗಳಿಸಿ ನಿರ್ಗಮಿಸಿದರೆ, ನಂತ ಬಂದ ಇಶಾನ್‌ ಕಿಸಾನ್‌ ಸೊನ್ನೆ ಸುತ್ತಿದರು. ಭಾರತ ತಂಡ ಪವರ್‌ ಪ್ಲೇ ಅಂತ್ಯಕ್ಕೆ2 ವಿಕೆಟ್‌ ಕಳೆದುಕೊಂಡು 43 ರನ್‌ ಗಳಿಸಿತು.

ನಂತರ ನಾಯಕ ಸೂರ್ಯಕುಮಾರ್‌ ಯಾದವ್‌ 39 ರನ್ ಗಳಿಸಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸದೃಢವಾಗಿ ಇನ್ನಿಂಗ್ಸ್‌ ಕಟ್ಟಿದರು. ತಾವೆದುರಿಸಿದ 57 ಎಸೆತಗಳಲ್ಲಿ 13 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 123 ರನ್‌ ಬಾರಿಸಿದರು. ಆಸೀಸ್‌ ವಿರುದ್ಧ ಟಿ20ಯಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.  ಕೊನೆಯಲ್ಲಿ ಬಂದ ತಿಲಕ್‌ ವರ್ಮಾ 31 ರನ್‌ ಬಾರಿಸಿದರು.

ಅಂತಿಮವಾಗಿ ತಂಡ 20 ಓವರ್‌ಗಳಲ್ಲಿ 3  ವಿಕೆಟ್‌ ಕಳೆದುಕೊಂಡು 222 ರನ್‌ ಬಾರಿಸಿ ಆಸ್ಟ್ರೇಲಿಯಾಗೆ ಬೃಹತ್‌ ಮೊತ್ತದ ಗುರಿಯನ್ನು ನೀಡಿತು.

ಆಸೀಸ್‌ ಪರ ಬೆಹ್ರೆನ್‌ಡ್ರಾಫ್‌, ಹರ್ಡಲ್‌ ಮತ್ತು ರಿಚರ್ಡ್‌ಸನ್‌ ತಲಾ 1 ವಿಕೆಟ್‌ ಪಡೆದರು.

ಇದನ್ನು ಬೆನ್ನಟ್ಟಿದ ಆಸೀಸ್‌ ಪರ, ಟ್ರಾವೀಸ್‌ ಹೆಡ್‌ 36, ಆರೋನ್‌ ಹರ್ಡಲ್‌ 16, ಜೋಶ್‌ ಇಂಗ್ಲಿಸ್‌ 10 ರನ್‌ ಬಾರಿಸಿದರು. ತಂಡ ಒಂದು ಕಡೆ ವಿಕೆಟ್‌ ಕೆಲೆದುಕೊಳ್ಳುತ್ತಿದ್ದರೇ ಮತ್ತೊಂದು ಕಡೆ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ಭರ್ಜರಿ ಶತಕ ದಾಖಲಿಸಿ ತಂಡಕ್ಕೆ ಗೆಲುವಿನ ಕಾಣಿಕೆ ನೀಡಿದರು.

48 ಎಸೆತಗಳಲ್ಲಿ 8 ಬೌಂಡರಿ ಹಾಗೂ 8 ಸಿಕ್ಸರ್‌ ಮೂಲಕ ಬರೋಬ್ಬರಿ 104 ರನ್‌ ದಾಖಲಿಸಿದರು. ಇವರಿಗೆ ಮಾರ್ಕಸ್‌ ಸ್ಟೋಯ್ನಿಸ್‌ 17, ಮ್ಯಾಥ್ಯೂ ವೇಡ್‌ 28 ರನ್‌ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.

ಇಂಡಿಯಾ ಪರ ರವಿ ಬಿಷ್ಣೋಯಿ 2, ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮತ್ತು ಅಕ್ಷರ್‌ ಪಟೇಲ್‌ ತಲಾ 1 ವಿಕೆಟ್‌ ಪಡೆದರು.

ಕನ್ನಡಿಗ ಪ್ರಸಿದ್ಧ್‌ ಕೃಷ್ಣ 4 ಓವರ್‌ ಬೌಲ್‌ ಮಾಡಿ 68 ರನ್‌ ನೀಡಿ ದುಬಾರಿ ಬೌಲರ್‌ ಎನಿಸಿದರು.

ಪಂದ್ಯ ಶ್ರೇಷ್ಠ : ಗ್ಲೇನ್‌ ಮ್ಯಾಕ್ಸ್‌ವೆಲ್‌

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

2 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

2 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

6 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

6 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

6 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

6 hours ago