ಕ್ರೀಡೆ

ಮ್ಯಾಕ್ಸ್‌ವೆಲ್‌ ಅಬ್ಬರದ ಶತಕದಾಟಕ್ಕೆ ಶರಣಾದ ಭಾರತ

ಗುವಾಹಟಿ : ಆಸ್ಟ್ರೇಲಿಯಾದ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ಅವರ ಅಬ್ಬರದ ಬ್ಯಾಟಿಂಗ್‌ ಮುಂದೆ ಮಂಕಾದ ಭಾರತ ತಂಡ 5 ವಿಕೆಟ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಸರಣಿಯಲ್ಲಿ 2-1 ಅಂತರದಲ್ಲಿ ಭಾರತ ಮುಂದಿದೆ.

ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 222ರನ್‌ಗಳ ಬೃಹತ್‌ ಮೊತ್ತ ಚೇಸ್‌ ಮಾಡಿದ ಆಸೀಸ್‌ 20 ಓವರ್‌ಗಳಲ್ಲಿ 225 ರನ್‌ ದಾಖಲಿಸಿದೆ. ಆ ಮೂಲಕ ಈ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿತು.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಭಾರತ ತಂಡ, ಆರಂಭದಲ್ಲಿಯೇ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್‌ ಕೇವಲ 6 ರನ್‌ ಗಳಿಸಿ ನಿರ್ಗಮಿಸಿದರೆ, ನಂತ ಬಂದ ಇಶಾನ್‌ ಕಿಸಾನ್‌ ಸೊನ್ನೆ ಸುತ್ತಿದರು. ಭಾರತ ತಂಡ ಪವರ್‌ ಪ್ಲೇ ಅಂತ್ಯಕ್ಕೆ2 ವಿಕೆಟ್‌ ಕಳೆದುಕೊಂಡು 43 ರನ್‌ ಗಳಿಸಿತು.

ನಂತರ ನಾಯಕ ಸೂರ್ಯಕುಮಾರ್‌ ಯಾದವ್‌ 39 ರನ್ ಗಳಿಸಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸದೃಢವಾಗಿ ಇನ್ನಿಂಗ್ಸ್‌ ಕಟ್ಟಿದರು. ತಾವೆದುರಿಸಿದ 57 ಎಸೆತಗಳಲ್ಲಿ 13 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 123 ರನ್‌ ಬಾರಿಸಿದರು. ಆಸೀಸ್‌ ವಿರುದ್ಧ ಟಿ20ಯಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.  ಕೊನೆಯಲ್ಲಿ ಬಂದ ತಿಲಕ್‌ ವರ್ಮಾ 31 ರನ್‌ ಬಾರಿಸಿದರು.

ಅಂತಿಮವಾಗಿ ತಂಡ 20 ಓವರ್‌ಗಳಲ್ಲಿ 3  ವಿಕೆಟ್‌ ಕಳೆದುಕೊಂಡು 222 ರನ್‌ ಬಾರಿಸಿ ಆಸ್ಟ್ರೇಲಿಯಾಗೆ ಬೃಹತ್‌ ಮೊತ್ತದ ಗುರಿಯನ್ನು ನೀಡಿತು.

ಆಸೀಸ್‌ ಪರ ಬೆಹ್ರೆನ್‌ಡ್ರಾಫ್‌, ಹರ್ಡಲ್‌ ಮತ್ತು ರಿಚರ್ಡ್‌ಸನ್‌ ತಲಾ 1 ವಿಕೆಟ್‌ ಪಡೆದರು.

ಇದನ್ನು ಬೆನ್ನಟ್ಟಿದ ಆಸೀಸ್‌ ಪರ, ಟ್ರಾವೀಸ್‌ ಹೆಡ್‌ 36, ಆರೋನ್‌ ಹರ್ಡಲ್‌ 16, ಜೋಶ್‌ ಇಂಗ್ಲಿಸ್‌ 10 ರನ್‌ ಬಾರಿಸಿದರು. ತಂಡ ಒಂದು ಕಡೆ ವಿಕೆಟ್‌ ಕೆಲೆದುಕೊಳ್ಳುತ್ತಿದ್ದರೇ ಮತ್ತೊಂದು ಕಡೆ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ಭರ್ಜರಿ ಶತಕ ದಾಖಲಿಸಿ ತಂಡಕ್ಕೆ ಗೆಲುವಿನ ಕಾಣಿಕೆ ನೀಡಿದರು.

48 ಎಸೆತಗಳಲ್ಲಿ 8 ಬೌಂಡರಿ ಹಾಗೂ 8 ಸಿಕ್ಸರ್‌ ಮೂಲಕ ಬರೋಬ್ಬರಿ 104 ರನ್‌ ದಾಖಲಿಸಿದರು. ಇವರಿಗೆ ಮಾರ್ಕಸ್‌ ಸ್ಟೋಯ್ನಿಸ್‌ 17, ಮ್ಯಾಥ್ಯೂ ವೇಡ್‌ 28 ರನ್‌ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.

ಇಂಡಿಯಾ ಪರ ರವಿ ಬಿಷ್ಣೋಯಿ 2, ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮತ್ತು ಅಕ್ಷರ್‌ ಪಟೇಲ್‌ ತಲಾ 1 ವಿಕೆಟ್‌ ಪಡೆದರು.

ಕನ್ನಡಿಗ ಪ್ರಸಿದ್ಧ್‌ ಕೃಷ್ಣ 4 ಓವರ್‌ ಬೌಲ್‌ ಮಾಡಿ 68 ರನ್‌ ನೀಡಿ ದುಬಾರಿ ಬೌಲರ್‌ ಎನಿಸಿದರು.

ಪಂದ್ಯ ಶ್ರೇಷ್ಠ : ಗ್ಲೇನ್‌ ಮ್ಯಾಕ್ಸ್‌ವೆಲ್‌

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago