ಕ್ರೀಡೆ

ಭಾರತಕ್ಕೆ ವೈಟ್‌ವಾಶ್‌ ಮುಖಭಂಗ : 2 ದಶಕಗಳ ಬಳಿಕ ಸರಣಿ ಗೆದ್ದ ದ.ಆಫ್ರಿಕಾ

ಗುವಾಹಟಿ : ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲುವ ದಕ್ಷಿಣ ಆಫ್ರಿಕಾ ತಂಡದ ಕನಸು ಕೊನೆಗೂ ಈಡೇರಿದೆ. ಅದು ಕೂಡ ಬರೋಬ್ಬರಿ ೨೬ ವರ್ಷಗಳ ಬಳಿಕ. ಅಂದರೆ ೧೯೯೯ರ ಬಳಿಕ ದಕ್ಷಿಣ ಆಫ್ರಿಕಾ ಒಮ್ಮೆಯೂ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿರಲಿಲ್ಲ. ಈ ಬಾರಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಟೆಂಬಾ ಬವುಮಾ ಪಡೆ ಹೊಸ ಇತಿಹಾಸ ನಿರ್ಮಿಸಿದೆ.

ಗುವಾಹಟಿಯಲ್ಲಿ ನಡೆದ ಭಾರತದ ವಿರುದ್ಧದ ೨ನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ೪೦೮ ರನ್‌ಗಳ ಅಮೋಘ ಜಯ ಸಾಽಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ೨-೦ ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಕೊಲ್ಕತ್ತಾದಲ್ಲಿ ನಡೆದ ಈ ಸರಣಿಯ ಮೊದಲ ಮ್ಯಾಚ್‌ನಲ್ಲಿ ಸೌತ್ ಆಫ್ರಿಕಾ ತಂಡ ೩೦ ರನ್‌ಗಳ ಜಯ ಸಾಽಸಿತ್ತು. ಇದೀಗ ಗುವಾಹಟಿಯಲ್ಲೂ ಭಾರತ ತಂಡವನ್ನು ಬಗ್ಗು ಬಡಿಯುವಲ್ಲಿ ಯಶಸ್ವಿಯಾಗಿದೆ. ಈ ಫಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ ೪೮೯ ರನ್ ಕಲೆಹಾಕಿದ್ದರು.

ಇದನ್ನು ಓದಿ: ಅಂಧರ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಗೆದ್ದ ಭಾರತ

ಇದಕ್ಕುತ್ತರವಾಗಿ ಪ್ರಥಮ ಇನ್ನಿಂಗ್ಸ್ ಆಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಕೇವಲ ೨೦೧ ರನ್‌ಗಳು ಮಾತ್ರ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ೨೮೮ ರನ್‌ಗಳ ಹಿನ್ನಡೆ ಅನುಭವಿಸಿತು.

೨೮೮ ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ೫ ವಿಕೆಟ್ ನಷ್ಟಕ್ಕೆ ೨೬೦ ರನ್‌ಗಳಿಸಿ ಡಿಕ್ಲೇರ್ ಘೋಷಿಸಿತು. ಈ ಮೂಲಕ ಭಾರತ ತಂಡಕ್ಕೆ ಕೊನೆಯ ಇನ್ನಿಂಗ್ಸ್‌ನಲ್ಲಿ ೫೪೯ ರನ್‌ಗಳ ಕಠಿಣ ಗುರಿ ನೀಡಿದ್ದರು.
ಈ ಕಠಿಣ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯದ ವೇಳೆ ಕೆಎಲ್ ರಾಹುಲ್ (೬) ಹಾಗೂ ಯಶಸ್ವಿ ಜೈಸ್ವಾಲ್ (೧೩) ಅವರ ವಿಕೆಟ್ ಕಳೆದುಕೊಂಡಿತು. ಇನ್ನು ಐದನೇ ದಿನದಾಟದ ಆರಂಭದಲ್ಲೇ ಕುಲ್ದೀಪ್ ಯಾದವ್ (೫) ಔಟಾದರು. ಇದರ ಬೆನ್ನಲ್ಲೇ ಧ್ರುವ್ ಜುರೆಲ್ (೨) ಕೂಡ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ನಾಯಕ ರಿಷಭ್ ಪಂತ್ ೧೩ ರನ್ ಬಾರಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಇದಾಗ್ಯೂ ಏಕಾಂಗಿ ಹೋರಾಟ ಮುಂದುವರಿಸಿದ ರವೀಂದ್ರ ಜಡೇಜಾ ೫೪ ರನ್ ಬಾರಿಸಿದರು. ಆದರೆ ಅಂತಿಮವಾಗಿ ೧೪೦ ರನ್‌ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾ ೪೦೮ ರನ್‌ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ ೨೬ ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಕಾಡುಕೋಣ ಡಿಕ್ಕಿ : ಪಲ್ಟಿಯಾದ ಗೂಡ್ಸ್‌ ವಾಹನ

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…

16 mins ago

ದೇವಾಲಯಗಳಲ್ಲಿ ರೀಲ್ಸ್‌ಗೆ ಶುಲ್ಕ

ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…

52 mins ago

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…

1 hour ago

ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…

2 hours ago

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

2 hours ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

4 hours ago