ಕ್ರೀಡೆ

IND vs ZIM 1st T20: ಜಿಂಬಾಬ್ವೆ ವಿರುದ್ಧ ಸೋತ ʼಯಂಗ್‌ ಟೀಮ್ ಇಂಡಿಯಾʼ

ಜಿಂಬಾಬ್ವೆ ಪ್ರವಾಸ ಕೈಗೊಂಡು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡುತ್ತಿರುವ ಶುಭ್ಮನ್‌ ಗಿಲ್‌ ನಾಯಕತ್ವದ ಯಂಗ್‌ ಟೀಮ್‌ ಇಂಡಿಯಾ ಇಂದು ( ಜುಲೈ 6 ) ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್‌ಗಳ ಹೀನಾಯ ಸೋಲನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ಭಾರತ ತಂಡ ಜಿಂಬಾಬ್ವೆಯನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಜಿಂಬಾಬ್ವೆ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 115 ರನ್‌ ಕಲೆಹಾಕಿ ಭಾರತಕ್ಕೆ 116 ರನ್‌ಗಳ ಸುಲಭ ಗುರಿಯನ್ನು ನೀಡಿತು. ಆದರೆ ಜಿಂಬಾಬ್ವೆ ಬೌಲಿಂಗ್‌ ದಾಳಿ ಮುಂದೆ ಮಂಕಾದ ಭಾರತ 19.5 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಜಿಂಬಾಬ್ವೆ ಇನ್ನಿಂಗ್ಸ್‌: ವೆಸ್ಲಿ ಮಾಧೆವೆರೆ 21, ಇನ್ನೋಸೆಂಟ್‌ ಡಕ್‌ಔಟ್‌, ಬ್ರಿಯಾನ್ ಬೆನೆಟ್ 22, ಸಿಕಂದರ್‌ ರಾಜಾ 17, ಡಿಯಾನ್‌ ಮೇರ್ಸ್‌ 23, ಜೋನಾಥನ್‌ ಡಕ್‌ಔಟ್‌, ಕ್ಲೈವ್‌ ಮಾಡೆಂಡ್‌ ಅಜೇಯ 29, ವೆಲ್ಲಿಂಗ್ಟನ್‌ ಮಸಾಕಡ್ಜ ಡಕ್‌ಔಟ್‌, ಲ್ಯೂಕ್‌ ಜೋಂಗ್ವೆ 1 ರನ್, ಮುಜರಾಬಾನಿ ಡಕ್‌ಔಟ್‌ ಮತ್ತು ಟೆಂಡೈ ಚಟಾರಾ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಭಾರತದ ಪರ ರವಿ ಬಿಷ್ಣೋಯಿ 4 ವಿಕೆಟ್‌, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌, ಅವೇಶ್‌ ಖಾನ್‌ ಹಾಗೂ ಮುಕೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತ ಇನ್ನಿಂಗ್ಸ್:‌ ಜಿಂಬಾಬ್ವೆ ನೀಡಿದ ಸುಲಭ ಗುರಿ ಬೆನ್ನಟ್ಟಲು ಯತ್ನಿಸಿದ ಭಾರತಕ್ಕೆ ಆರಂಭಿಕ ಆಘಾತವಾಯಿತು. ಮೊದಲ ಓವರ್‌ನಲ್ಲಿಯೇ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ ಡಕ್‌ಔಟ್‌ ಆದರೆ, ಮತ್ತೋರ್ವ ಆರಂಭಿಕ ಆಟಗಾರ ನಾಯಕ ಶುಭ್‌ಮನ್‌ ಗಿಲ್‌ 31 (29) ರನ್‌ ಗಳಿಸಿದರು.‌ ಅಂತಿಮ ಓವರ್‌ಗಳಲ್ಲಿ ಗೆಲುವಿನತ್ತ ಕೊಂಡೊಯ್ಯುವ ಪ್ರಯತ್ನ ನಡೆಸಿದ ವಾಷಿಂಗ್ಟನ್‌ ಸುಂದರ್‌ 27 ರನ್‌ ಗಳಿಸಿದರು. ಇನ್ನುಳಿದಂತೆ ರುತುರಾಜ್‌ ಗಾಯಕ್ವಾಡ್‌ 7, ರಿಯಾನ್‌ ಪರಾಗ್‌ 2, ಧ್ರುವ್‌ ಜುರೆಲ್‌ 6, ರವಿ ಬಿಷ್ಣೋಯಿ 9, ಅವೇಶ್‌ ಖಾನ್‌ 16, ಮುಕೇಶ್‌ ಕುಮಾರ್‌ ಡಕ್‌ಔಟ್ ಮತ್ತು ಖಲೀಲ್‌ ಅಹ್ಮದ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಜಿಂಬಾಬ್ವೆ ಪರ ನಾಯಕ ಸಿಕಂದರ್‌ ರಾಜಾ ಮತ್ತು ಟೆಂಡೈ ಚಟಾರಾ ತಲಾ 3 ವಿಕೆಟ್‌, ಲ್ಯೂಕ್‌ ಜೊಂಗ್ವೆ, ಬ್ಲೆಸಿಂಗ್‌ ಮಜಾರಾಬಾನಿ, ವೆಲ್ಲಿಂಗ್ಟನ್‌ ಮಸಾಕಡ್ಜ ಮತ್ತು ಬ್ರಿಯಾನ್‌ ಬೆನೆಟ್‌ ತಲಾ ಒಂದೊಂದು ವಿಕೆಟ್‌ ಪಡೆದರು.

AddThis Website Tools
ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಿನಲ್ಲಿ ಮರಗಳ ಹನನ ಪ್ರಕರಣ: ಮುಡಾ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಮೈಸೂರು: ರಸ್ತೆ ಅಗಲೀಕರಣದ ಹೆಸರೇಳಿ ಹೈದರ್‌ ಅಲಿ ರಸ್ತೆಯಲ್ಲಿ 40 ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ…

2 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂನಲ್ಲಿ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಚತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮೇ.14ಕ್ಕೆ ಮುಂದೂಡಿಕೆ…

5 mins ago

UPSC ಫಲಿತಾಂಶ ಪ್ರಕಟ: ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ದೇಶಕ್ಕೆ ನಂ.1

ನವದೆಹಲಿ: ಕೇಂದ್ರ ಲೋಕಸಭಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ಎಂಬುವವರು…

21 mins ago

ಸಾರ್ವಕಾಲಿಕ ದಾಖಲೆ ಕಂಡ ಚಿನ್ನದ ಬೆಲೆ: 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂ

ನವದೆಹಲಿ: ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದ್ದು, 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಾಟಿದೆ. ಜಾಗತಿಕ ಮಾರುಕಟ್ಟೆಯಲ್ಲಿನ…

27 mins ago

ಧಾರ್ಮಿಕ ಪದ್ಧತಿ ದೇಶದ ಪರಂಪರೆ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು…

34 mins ago

ಚುನಾವಣಾ ತಕರಾರು ಅರ್ಜಿ: ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು: ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಶಂಕರ್‌ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಚುನಾವಣಾ…

56 mins ago