ಕ್ರೀಡೆ

IND vs ZIM 1st T20: ಜಿಂಬಾಬ್ವೆ ವಿರುದ್ಧ ಸೋತ ʼಯಂಗ್‌ ಟೀಮ್ ಇಂಡಿಯಾʼ

ಜಿಂಬಾಬ್ವೆ ಪ್ರವಾಸ ಕೈಗೊಂಡು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡುತ್ತಿರುವ ಶುಭ್ಮನ್‌ ಗಿಲ್‌ ನಾಯಕತ್ವದ ಯಂಗ್‌ ಟೀಮ್‌ ಇಂಡಿಯಾ ಇಂದು ( ಜುಲೈ 6 ) ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್‌ಗಳ ಹೀನಾಯ ಸೋಲನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ಭಾರತ ತಂಡ ಜಿಂಬಾಬ್ವೆಯನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಜಿಂಬಾಬ್ವೆ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 115 ರನ್‌ ಕಲೆಹಾಕಿ ಭಾರತಕ್ಕೆ 116 ರನ್‌ಗಳ ಸುಲಭ ಗುರಿಯನ್ನು ನೀಡಿತು. ಆದರೆ ಜಿಂಬಾಬ್ವೆ ಬೌಲಿಂಗ್‌ ದಾಳಿ ಮುಂದೆ ಮಂಕಾದ ಭಾರತ 19.5 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಜಿಂಬಾಬ್ವೆ ಇನ್ನಿಂಗ್ಸ್‌: ವೆಸ್ಲಿ ಮಾಧೆವೆರೆ 21, ಇನ್ನೋಸೆಂಟ್‌ ಡಕ್‌ಔಟ್‌, ಬ್ರಿಯಾನ್ ಬೆನೆಟ್ 22, ಸಿಕಂದರ್‌ ರಾಜಾ 17, ಡಿಯಾನ್‌ ಮೇರ್ಸ್‌ 23, ಜೋನಾಥನ್‌ ಡಕ್‌ಔಟ್‌, ಕ್ಲೈವ್‌ ಮಾಡೆಂಡ್‌ ಅಜೇಯ 29, ವೆಲ್ಲಿಂಗ್ಟನ್‌ ಮಸಾಕಡ್ಜ ಡಕ್‌ಔಟ್‌, ಲ್ಯೂಕ್‌ ಜೋಂಗ್ವೆ 1 ರನ್, ಮುಜರಾಬಾನಿ ಡಕ್‌ಔಟ್‌ ಮತ್ತು ಟೆಂಡೈ ಚಟಾರಾ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಭಾರತದ ಪರ ರವಿ ಬಿಷ್ಣೋಯಿ 4 ವಿಕೆಟ್‌, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌, ಅವೇಶ್‌ ಖಾನ್‌ ಹಾಗೂ ಮುಕೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತ ಇನ್ನಿಂಗ್ಸ್:‌ ಜಿಂಬಾಬ್ವೆ ನೀಡಿದ ಸುಲಭ ಗುರಿ ಬೆನ್ನಟ್ಟಲು ಯತ್ನಿಸಿದ ಭಾರತಕ್ಕೆ ಆರಂಭಿಕ ಆಘಾತವಾಯಿತು. ಮೊದಲ ಓವರ್‌ನಲ್ಲಿಯೇ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ ಡಕ್‌ಔಟ್‌ ಆದರೆ, ಮತ್ತೋರ್ವ ಆರಂಭಿಕ ಆಟಗಾರ ನಾಯಕ ಶುಭ್‌ಮನ್‌ ಗಿಲ್‌ 31 (29) ರನ್‌ ಗಳಿಸಿದರು.‌ ಅಂತಿಮ ಓವರ್‌ಗಳಲ್ಲಿ ಗೆಲುವಿನತ್ತ ಕೊಂಡೊಯ್ಯುವ ಪ್ರಯತ್ನ ನಡೆಸಿದ ವಾಷಿಂಗ್ಟನ್‌ ಸುಂದರ್‌ 27 ರನ್‌ ಗಳಿಸಿದರು. ಇನ್ನುಳಿದಂತೆ ರುತುರಾಜ್‌ ಗಾಯಕ್ವಾಡ್‌ 7, ರಿಯಾನ್‌ ಪರಾಗ್‌ 2, ಧ್ರುವ್‌ ಜುರೆಲ್‌ 6, ರವಿ ಬಿಷ್ಣೋಯಿ 9, ಅವೇಶ್‌ ಖಾನ್‌ 16, ಮುಕೇಶ್‌ ಕುಮಾರ್‌ ಡಕ್‌ಔಟ್ ಮತ್ತು ಖಲೀಲ್‌ ಅಹ್ಮದ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಜಿಂಬಾಬ್ವೆ ಪರ ನಾಯಕ ಸಿಕಂದರ್‌ ರಾಜಾ ಮತ್ತು ಟೆಂಡೈ ಚಟಾರಾ ತಲಾ 3 ವಿಕೆಟ್‌, ಲ್ಯೂಕ್‌ ಜೊಂಗ್ವೆ, ಬ್ಲೆಸಿಂಗ್‌ ಮಜಾರಾಬಾನಿ, ವೆಲ್ಲಿಂಗ್ಟನ್‌ ಮಸಾಕಡ್ಜ ಮತ್ತು ಬ್ರಿಯಾನ್‌ ಬೆನೆಟ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

27 mins ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

51 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

53 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

1 hour ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

1 hour ago