ಕ್ರೀಡೆ

IND vs ZIM 1st T20: ಜಿಂಬಾಬ್ವೆ ವಿರುದ್ಧ ಸೋತ ʼಯಂಗ್‌ ಟೀಮ್ ಇಂಡಿಯಾʼ

ಜಿಂಬಾಬ್ವೆ ಪ್ರವಾಸ ಕೈಗೊಂಡು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡುತ್ತಿರುವ ಶುಭ್ಮನ್‌ ಗಿಲ್‌ ನಾಯಕತ್ವದ ಯಂಗ್‌ ಟೀಮ್‌ ಇಂಡಿಯಾ ಇಂದು ( ಜುಲೈ 6 ) ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್‌ಗಳ ಹೀನಾಯ ಸೋಲನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ಭಾರತ ತಂಡ ಜಿಂಬಾಬ್ವೆಯನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಜಿಂಬಾಬ್ವೆ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 115 ರನ್‌ ಕಲೆಹಾಕಿ ಭಾರತಕ್ಕೆ 116 ರನ್‌ಗಳ ಸುಲಭ ಗುರಿಯನ್ನು ನೀಡಿತು. ಆದರೆ ಜಿಂಬಾಬ್ವೆ ಬೌಲಿಂಗ್‌ ದಾಳಿ ಮುಂದೆ ಮಂಕಾದ ಭಾರತ 19.5 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಜಿಂಬಾಬ್ವೆ ಇನ್ನಿಂಗ್ಸ್‌: ವೆಸ್ಲಿ ಮಾಧೆವೆರೆ 21, ಇನ್ನೋಸೆಂಟ್‌ ಡಕ್‌ಔಟ್‌, ಬ್ರಿಯಾನ್ ಬೆನೆಟ್ 22, ಸಿಕಂದರ್‌ ರಾಜಾ 17, ಡಿಯಾನ್‌ ಮೇರ್ಸ್‌ 23, ಜೋನಾಥನ್‌ ಡಕ್‌ಔಟ್‌, ಕ್ಲೈವ್‌ ಮಾಡೆಂಡ್‌ ಅಜೇಯ 29, ವೆಲ್ಲಿಂಗ್ಟನ್‌ ಮಸಾಕಡ್ಜ ಡಕ್‌ಔಟ್‌, ಲ್ಯೂಕ್‌ ಜೋಂಗ್ವೆ 1 ರನ್, ಮುಜರಾಬಾನಿ ಡಕ್‌ಔಟ್‌ ಮತ್ತು ಟೆಂಡೈ ಚಟಾರಾ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಭಾರತದ ಪರ ರವಿ ಬಿಷ್ಣೋಯಿ 4 ವಿಕೆಟ್‌, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌, ಅವೇಶ್‌ ಖಾನ್‌ ಹಾಗೂ ಮುಕೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತ ಇನ್ನಿಂಗ್ಸ್:‌ ಜಿಂಬಾಬ್ವೆ ನೀಡಿದ ಸುಲಭ ಗುರಿ ಬೆನ್ನಟ್ಟಲು ಯತ್ನಿಸಿದ ಭಾರತಕ್ಕೆ ಆರಂಭಿಕ ಆಘಾತವಾಯಿತು. ಮೊದಲ ಓವರ್‌ನಲ್ಲಿಯೇ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ ಡಕ್‌ಔಟ್‌ ಆದರೆ, ಮತ್ತೋರ್ವ ಆರಂಭಿಕ ಆಟಗಾರ ನಾಯಕ ಶುಭ್‌ಮನ್‌ ಗಿಲ್‌ 31 (29) ರನ್‌ ಗಳಿಸಿದರು.‌ ಅಂತಿಮ ಓವರ್‌ಗಳಲ್ಲಿ ಗೆಲುವಿನತ್ತ ಕೊಂಡೊಯ್ಯುವ ಪ್ರಯತ್ನ ನಡೆಸಿದ ವಾಷಿಂಗ್ಟನ್‌ ಸುಂದರ್‌ 27 ರನ್‌ ಗಳಿಸಿದರು. ಇನ್ನುಳಿದಂತೆ ರುತುರಾಜ್‌ ಗಾಯಕ್ವಾಡ್‌ 7, ರಿಯಾನ್‌ ಪರಾಗ್‌ 2, ಧ್ರುವ್‌ ಜುರೆಲ್‌ 6, ರವಿ ಬಿಷ್ಣೋಯಿ 9, ಅವೇಶ್‌ ಖಾನ್‌ 16, ಮುಕೇಶ್‌ ಕುಮಾರ್‌ ಡಕ್‌ಔಟ್ ಮತ್ತು ಖಲೀಲ್‌ ಅಹ್ಮದ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಜಿಂಬಾಬ್ವೆ ಪರ ನಾಯಕ ಸಿಕಂದರ್‌ ರಾಜಾ ಮತ್ತು ಟೆಂಡೈ ಚಟಾರಾ ತಲಾ 3 ವಿಕೆಟ್‌, ಲ್ಯೂಕ್‌ ಜೊಂಗ್ವೆ, ಬ್ಲೆಸಿಂಗ್‌ ಮಜಾರಾಬಾನಿ, ವೆಲ್ಲಿಂಗ್ಟನ್‌ ಮಸಾಕಡ್ಜ ಮತ್ತು ಬ್ರಿಯಾನ್‌ ಬೆನೆಟ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago