ಕ್ರೀಡೆ

ಆಸ್ಟ್ರೇಲಿಯಾ vs ಭಾರತ ನಡುವಿನ ವಿಶ್ವಕಪ್‌ನ ಎಲ್ಲಾ ಪಂದ್ಯಗಳ ಫಲಿತಾಂಶದ ವಿವರ

ನಾಳೆ ( ನವೆಂಬರ್‌ 19 ) ಬಹು ನಿರೀಕ್ಷಿತ ವಿಶ್ವಕಪ್‌ ಫೈನಲ್‌ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್‌ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಏಕದಿನ ವಿಶ್ವಕಪ್‌ ಫೈನಲ್‌ ಆಡಿರುವ ಆಸ್ಟ್ರೇಲಿಯಾ ವಿರುದ್ಧ ಈ ಬಾರಿಯ ಟೂರ್ನಿಯಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಟೀಮ್‌ ಇಂಡಿಯಾ ಕಣಕ್ಕಿಳಿಯಲಿದೆ.

ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 1983ರ ವಿಶ್ವಕಪ್‌ನಿಂದ ಈ ಬಾರಿಯ ವಿಶ್ವಕಪ್‌ನ ಲೀಗ್‌ ಹಂತದ ಪಂದ್ಯದವರೆಗೂ ಒಟ್ಟು 13 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಎಲ್ಲಾ ಪಂದ್ಯಗಳ ಫಲಿತಾಂಶದ ವಿವರ ಈ ಕೆಳಕಂಡಂತಿದೆ..

1983 : ಜೂನ್‌ 13 – ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 162 ರನ್‌ಗಳ ಜಯ & ಜೂನ್‌ 20ರಂದು ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 118 ರನ್‌ಗಳ ಜಯ
1987: ಅಕ್ಟೋಬರ್‌ 9 – ಆಸ್ಟ್ರೇಲಿಯಾಗೆ 1 ರನ್‌ ಅಂತರದ ಜಯ & ಅಕ್ಟೋಬರ್‌ 22ರಂದು ಭಾರತಕ್ಕೆ 56 ರನ್‌ಗಳ ಜಯ
1992: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ ಒಂದು ರನ್‌ ಜಯ
1996: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 16 ರನ್‌ ಜಯ
1999: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 77 ರನ್‌ ಜಯ
2003: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 9 ವಿಕೆಟ್‌ಗಳ ಜಯ & ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ 125 ರನ್‌ಗಳ ಗೆಲುವು
2011: ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್‌ಗಳ ಗೆಲುವು
2015 : ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾಗೆ 95 ರನ್‌ಗಳ ಗೆಲುವು
2019: ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 36 ರನ್‌ಗಳ ಗೆಲುವು
2023: ಅಕ್ಟೋಬರ್‌ 8 ರಂದು ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಗೆಲುವು 

andolana

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

1 hour ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

3 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

3 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago