ಕಳೆದ ಭಾನುವಾರ ( ನವೆಂಬರ್ 19 ) ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ ಭಾರತದಲ್ಲಿಯೇ ಬೀಡುಬಿಟ್ಟಿದ್ದು, ಈ ಹಿಂದೆ ನಿಗದಿಯಾಗಿದ್ದಂತೆ ನಾಳೆಯಿಂದ ( ನವೆಂಬರ್ 23 ) ಐದು ಪಂದ್ಯಗಳ ಟಿ 20 ಸರಣಿಯಲ್ಲಿ ಸೆಣಸಾಟ ನಡೆಸಲಿದೆ.
ಈ ಸರಣಿಯಲ್ಲಿ ಎರಡೂ ತಂಡಗಳ ಕೆಲ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಇನ್ನು ಈ ಸರಣಿಯಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳು ಎಲ್ಲೆಲ್ಲಿ ಯಾವ ದಿನ ನಡೆಯಲಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..
ಮೊದಲ ಟಿ 20 ಪಂದ್ಯ, ನವೆಂಬರ್ 23 : ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ
ಎರಡನೇ ಟಿ 20 ಪಂದ್ಯ, ನವೆಂಬರ್ 26 : ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ತಿರುವನಂತಪುರಂ
ಮೂರನೇ ಟಿ 20 ಪಂದ್ಯ, ನವೆಂಬರ್ 28 : ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣ, ಗುವಾಹಟಿ
ನಾಲ್ಕನೇ ಟಿ 20 ಪಂದ್ಯ, ಡಿಸೆಂಬರ್ 1: ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ರಾಯ್ಪುರ್
ಐದನೇ ಟಿ 20 ಪಂದ್ಯ, ಡಿಸೆಂಬರ್ 3 : ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಬೆಂಗಳೂರು.
( ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿವೆ )
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…