ಕ್ರೀಡೆ

ವಿಶ್ವಕಪ್‌ ಸೋಲಿನ ಬೆನ್ನಲ್ಲೇ ಆಸೀಸ್‌ ವಿರುದ್ಧ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ ಭಾರತ; ಎಲ್ಲೆಲ್ಲಿ ಪಂದ್ಯ?

ಕಳೆದ ಭಾನುವಾರ ( ನವೆಂಬರ್‌ 19 ) ನಡೆದ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ ಭಾರತದಲ್ಲಿಯೇ ಬೀಡುಬಿಟ್ಟಿದ್ದು, ಈ ಹಿಂದೆ ನಿಗದಿಯಾಗಿದ್ದಂತೆ ನಾಳೆಯಿಂದ ( ನವೆಂಬರ್‌ 23 ) ಐದು ಪಂದ್ಯಗಳ ಟಿ 20 ಸರಣಿಯಲ್ಲಿ ಸೆಣಸಾಟ ನಡೆಸಲಿದೆ.

ಈ ಸರಣಿಯಲ್ಲಿ ಎರಡೂ ತಂಡಗಳ ಕೆಲ ಸ್ಟಾರ್‌ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಟೀಮ್‌ ಇಂಡಿಯಾವನ್ನು ಸೂರ್ಯಕುಮಾರ್‌ ಯಾದವ್‌ ಮುನ್ನಡೆಸಿದರೆ, ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್‌ ಮುನ್ನಡೆಸಲಿದ್ದಾರೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಇನ್ನು ಈ ಸರಣಿಯಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳು ಎಲ್ಲೆಲ್ಲಿ ಯಾವ ದಿನ ನಡೆಯಲಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಮೊದಲ ಟಿ 20 ಪಂದ್ಯ, ನವೆಂಬರ್‌ 23 : ವೈಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ

ಎರಡನೇ ಟಿ 20 ಪಂದ್ಯ, ನವೆಂಬರ್‌ 26 : ಗ್ರೀನ್‌ ಫೀಲ್ಡ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ, ತಿರುವನಂತಪುರಂ

ಮೂರನೇ ಟಿ 20 ಪಂದ್ಯ, ನವೆಂಬರ್‌ 28 : ಬರ್ಸಾಪರ ಕ್ರಿಕೆಟ್‌ ಕ್ರೀಡಾಂಗಣ, ಗುವಾಹಟಿ

ನಾಲ್ಕನೇ ಟಿ 20 ಪಂದ್ಯ, ಡಿಸೆಂಬರ್‌ 1: ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ, ರಾಯ್‌ಪುರ್

ಐದನೇ ಟಿ 20 ಪಂದ್ಯ, ಡಿಸೆಂಬರ್‌ 3 : ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ, ಬೆಂಗಳೂರು.

( ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿವೆ )

andolana

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

4 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

5 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

5 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

5 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

6 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

7 hours ago