ಕಳೆದ ಭಾನುವಾರ ( ನವೆಂಬರ್ 19 ) ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ ಭಾರತದಲ್ಲಿಯೇ ಬೀಡುಬಿಟ್ಟಿದ್ದು, ಈ ಹಿಂದೆ ನಿಗದಿಯಾಗಿದ್ದಂತೆ ನಾಳೆಯಿಂದ ( ನವೆಂಬರ್ 23 ) ಐದು ಪಂದ್ಯಗಳ ಟಿ 20 ಸರಣಿಯಲ್ಲಿ ಸೆಣಸಾಟ ನಡೆಸಲಿದೆ.
ಈ ಸರಣಿಯಲ್ಲಿ ಎರಡೂ ತಂಡಗಳ ಕೆಲ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಇನ್ನು ಈ ಸರಣಿಯಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳು ಎಲ್ಲೆಲ್ಲಿ ಯಾವ ದಿನ ನಡೆಯಲಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..
ಮೊದಲ ಟಿ 20 ಪಂದ್ಯ, ನವೆಂಬರ್ 23 : ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ
ಎರಡನೇ ಟಿ 20 ಪಂದ್ಯ, ನವೆಂಬರ್ 26 : ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ತಿರುವನಂತಪುರಂ
ಮೂರನೇ ಟಿ 20 ಪಂದ್ಯ, ನವೆಂಬರ್ 28 : ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣ, ಗುವಾಹಟಿ
ನಾಲ್ಕನೇ ಟಿ 20 ಪಂದ್ಯ, ಡಿಸೆಂಬರ್ 1: ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ರಾಯ್ಪುರ್
ಐದನೇ ಟಿ 20 ಪಂದ್ಯ, ಡಿಸೆಂಬರ್ 3 : ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಬೆಂಗಳೂರು.
( ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿವೆ )
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…