ಕ್ರೀಡೆ

ವಿಶ್ವಕಪ್‌ ಸೋಲಿನ ಬೆನ್ನಲ್ಲೇ ಆಸೀಸ್‌ ವಿರುದ್ಧ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ ಭಾರತ; ಎಲ್ಲೆಲ್ಲಿ ಪಂದ್ಯ?

ಕಳೆದ ಭಾನುವಾರ ( ನವೆಂಬರ್‌ 19 ) ನಡೆದ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ ಭಾರತದಲ್ಲಿಯೇ ಬೀಡುಬಿಟ್ಟಿದ್ದು, ಈ ಹಿಂದೆ ನಿಗದಿಯಾಗಿದ್ದಂತೆ ನಾಳೆಯಿಂದ ( ನವೆಂಬರ್‌ 23 ) ಐದು ಪಂದ್ಯಗಳ ಟಿ 20 ಸರಣಿಯಲ್ಲಿ ಸೆಣಸಾಟ ನಡೆಸಲಿದೆ.

ಈ ಸರಣಿಯಲ್ಲಿ ಎರಡೂ ತಂಡಗಳ ಕೆಲ ಸ್ಟಾರ್‌ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಟೀಮ್‌ ಇಂಡಿಯಾವನ್ನು ಸೂರ್ಯಕುಮಾರ್‌ ಯಾದವ್‌ ಮುನ್ನಡೆಸಿದರೆ, ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್‌ ಮುನ್ನಡೆಸಲಿದ್ದಾರೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಇನ್ನು ಈ ಸರಣಿಯಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳು ಎಲ್ಲೆಲ್ಲಿ ಯಾವ ದಿನ ನಡೆಯಲಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಮೊದಲ ಟಿ 20 ಪಂದ್ಯ, ನವೆಂಬರ್‌ 23 : ವೈಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ

ಎರಡನೇ ಟಿ 20 ಪಂದ್ಯ, ನವೆಂಬರ್‌ 26 : ಗ್ರೀನ್‌ ಫೀಲ್ಡ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ, ತಿರುವನಂತಪುರಂ

ಮೂರನೇ ಟಿ 20 ಪಂದ್ಯ, ನವೆಂಬರ್‌ 28 : ಬರ್ಸಾಪರ ಕ್ರಿಕೆಟ್‌ ಕ್ರೀಡಾಂಗಣ, ಗುವಾಹಟಿ

ನಾಲ್ಕನೇ ಟಿ 20 ಪಂದ್ಯ, ಡಿಸೆಂಬರ್‌ 1: ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ, ರಾಯ್‌ಪುರ್

ಐದನೇ ಟಿ 20 ಪಂದ್ಯ, ಡಿಸೆಂಬರ್‌ 3 : ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ, ಬೆಂಗಳೂರು.

( ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭವಾಗಲಿವೆ )

andolana

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

23 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

41 mins ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

22 hours ago