ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ಟೀಮ್ ಇಂಡಿಯಾ ನಿನ್ನೆಯಿಂದ ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಮೊದಲ ಎರಡನೇ ದಿನದಾಟದಂತ್ಯಕ್ಕೆ 171 ರನ್ಗಳ ಮುನ್ನಡೆಯನ್ನು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿದ್ದ ಟೀಮ್ ಇಂಡಿಯಾ ಎರಡನೇ ದಿನದಾಟ ಆರಂಭಿಸಿ ಮೊದಲ ಇನ್ನಿಂಗ್ಸ್ನಲ್ಲಿ 396 ರನ್ಗಳಿಗೆ ಆಲ್ಔಟ್ ಆಯಿತು. ಯಶಸ್ವಿ ಜೈಸ್ವಾಲ್ 209 ರನ್ ಗಳಿಸಿ ಅಬ್ಬರಿಸಿದರು. ಅತ್ತ ತನ್ನ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 253 ರನ್ಗಳಿಗೆ ಆಲ್ಔಟ್ ಆಯಿತು. ಎರಡನೇ ದಿನವೇ ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೇ 28 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ ಅಜೇಯ 15 ಹಾಗೂ ನಾಯಕ ರೋಹಿತ್ ಶರ್ಮಾ ಅಜೇಯ 13 ರನ್ ಗಳಿಸಿದ್ದಾರೆ.
ಭಾರತದ ಮೊದಲ ಇನ್ನಿಂಗ್ಸ್: ಯಶಸ್ವಿ ಜೈಸ್ವಾಲ್ 209, ರೋಹಿತ್ ಶರ್ಮಾ 14, ಶುಬ್ಮನ್ ಗಿಲ್ 34, ಶ್ರೇಯಸ್ ಅಯ್ಯರ್ 27, ರಜತ್ ಪಾಟಿದಾರ್ 32, ಅಕ್ಷರ್ ಪಟೇಲ್ 27 ಹಾಗೂ ಶ್ರೀಕರ್ ಭರತ್ 17 ರನ್, ರವಿಚಂದ್ರನ್ ಅಶ್ವಿನ್ 20, ಜಸ್ಪ್ರೀತ್ ಬುಮ್ರಾ 6, ಮುಖೇಶ್ ಕುಮಾರ್ ಶೂನ್ಯ ಹಾಗೂ ಕುಲ್ದೀಪ್ ಯಾದವ್ ಅಜೇಯ 8 ರನ್ ಗಳಿಸಿದರು.
ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್, ಶೋಯೆಬ್ ಬಷೀರ್ ಹಾಗೂ ರೆಹಾನ್ ಅಹ್ಮದ್ ತಲಾ 3 ವಿಕೆಟ್ ಪಡೆದರು ಮತ್ತು ಟಾಮ್ ಹಾರ್ಟ್ಲಿ ಒಂದು ವಿಕೆಟ್ ಕಬಳಿಸಿದರು.
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್: ಜಾಕ್ ಕ್ವಾವ್ಲಿ 76, ಬೆನ್ ಡಕೆಟ್ 21, ಓಲ್ಲಿ ಪೋಪ್ 23, ಜೋ ರೂಟ್ 5, ಜಾನಿ ಬೇರ್ಸ್ಟೋವ್ 25, ನಾಯಕ ಬೆನ್ ಸ್ಟೋಕ್ಸ್ 47, ಬೆನ್ ಫೋಕ್ಸ್ 6, ರೆಹಾನ್ ಅಹ್ಮದ್ 6, ಟಾಮ್ ಹಾರ್ಟ್ಲಿ 21, ಜೇಮ್ಸ್ ಆಂಡರ್ಸನ್ 6 ಹಾಗೂ ಶೋಯೆಬ್ ಬಷೀರ್ ಅಜೇಯ 8 ರನ್ ಗಳಿಸಿದರು.
ಭಾರತದ ಪರ ಜಸ್ಪ್ರೀತ್ ಬುಮ್ರಾ 6 ವಿಕೆಟ್, ಕುಲ್ದೀಪ್ ಯಾದವ್ 3 ವಿಕೆಟ್ ಹಾಗೂ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.
ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…
ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…
ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…
ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್ಐಸಿಗೆ ಸೇರಿದ ಜಾಗದಲ್ಲಿ…
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…
ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…