ಕ್ರೀಡೆ

IND vs ENG 2nd Test: ಇಂಗ್ಲೆಂಡ್‌ 253 ರನ್‌ಗಳಿಗೆ ಆಲ್‌ಔಟ್; 2ನೇ ದಿನದಾಟದಂತ್ಯಕ್ಕೆ ಭಾರತಕ್ಕೆ 171 ರನ್‌ಗಳ ಮುನ್ನಡೆ‌

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ನಿನ್ನೆಯಿಂದ ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಮೊದಲ ಎರಡನೇ ದಿನದಾಟದಂತ್ಯಕ್ಕೆ 171 ರನ್‌ಗಳ ಮುನ್ನಡೆಯನ್ನು ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್‌ ನಷ್ಟಕ್ಕೆ 336 ರನ್‌ ಗಳಿಸಿದ್ದ ಟೀಮ್‌ ಇಂಡಿಯಾ ಎರಡನೇ ದಿನದಾಟ ಆರಂಭಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 396 ರನ್‌ಗಳಿಗೆ ಆಲ್‌ಔಟ್‌ ಆಯಿತು. ಯಶಸ್ವಿ ಜೈಸ್ವಾಲ್‌ 209 ರನ್‌ ಗಳಿಸಿ ಅಬ್ಬರಿಸಿದರು. ಅತ್ತ ತನ್ನ ಮೊದಲ ಇನ್ನಿಂಗ್ಸ್‌ ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಕೇವಲ 253 ರನ್‌ಗಳಿಗೆ ಆಲ್‌ಔಟ್‌ ಆಯಿತು. ಎರಡನೇ ದಿನವೇ ತನ್ನ ಎರಡನೇ ಇನ್ನಿಂಗ್ಸ್‌ ಬ್ಯಾಟಿಂಗ್‌ ಆರಂಭಿಸಿರುವ ಭಾರತ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 28 ರನ್‌ ಗಳಿಸಿದೆ. ಯಶಸ್ವಿ ಜೈಸ್ವಾಲ್‌ ಅಜೇಯ 15 ಹಾಗೂ ನಾಯಕ ರೋಹಿತ್‌ ಶರ್ಮಾ ಅಜೇಯ 13 ರನ್‌ ಗಳಿಸಿದ್ದಾರೆ.

ಭಾರತದ ಮೊದಲ ಇನ್ನಿಂಗ್ಸ್:‌ ಯಶಸ್ವಿ ಜೈಸ್ವಾಲ್‌ 209, ರೋಹಿತ್‌ ಶರ್ಮಾ 14, ಶುಬ್‌ಮನ್‌ ಗಿಲ್‌ 34, ಶ್ರೇಯಸ್‌ ಅಯ್ಯರ್‌ 27, ರಜತ್‌ ಪಾಟಿದಾರ್‌ 32, ಅಕ್ಷರ್‌ ಪಟೇಲ್‌ 27 ಹಾಗೂ ಶ್ರೀಕರ್‌ ಭರತ್‌ 17 ರನ್‌, ರವಿಚಂದ್ರನ್‌ ಅಶ್ವಿನ್‌ 20, ಜಸ್‌ಪ್ರೀತ್‌ ಬುಮ್ರಾ 6, ಮುಖೇಶ್‌ ಕುಮಾರ್‌ ಶೂನ್ಯ ಹಾಗೂ ಕುಲ್‌ದೀಪ್‌ ಯಾದವ್‌ ಅಜೇಯ 8 ರನ್‌ ಗಳಿಸಿದರು.

ಇಂಗ್ಲೆಂಡ್‌ ಪರ ಜೇಮ್ಸ್‌ ಆಂಡರ್‌ಸನ್‌, ಶೋಯೆಬ್‌ ಬಷೀರ್‌ ಹಾಗೂ ರೆಹಾನ್‌ ಅಹ್ಮದ್‌ ತಲಾ 3 ವಿಕೆಟ್‌ ಪಡೆದರು ಮತ್ತು ಟಾಮ್‌ ಹಾರ್ಟ್ಲಿ ಒಂದು ವಿಕೆಟ್‌ ಕಬಳಿಸಿದರು.

ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್:‌ ಜಾಕ್‌ ಕ್ವಾವ್ಲಿ 76, ಬೆನ್ ಡಕೆಟ್‌ 21, ಓಲ್ಲಿ ಪೋಪ್‌ 23, ಜೋ ರೂಟ್‌ 5, ಜಾನಿ ಬೇರ್‌ಸ್ಟೋವ್‌ 25, ನಾಯಕ ಬೆನ್‌ ಸ್ಟೋಕ್ಸ್‌ 47, ಬೆನ್‌ ಫೋಕ್ಸ್‌ 6, ರೆಹಾನ್‌ ಅಹ್ಮದ್‌ 6, ಟಾಮ್‌ ಹಾರ್ಟ್ಲಿ 21, ಜೇಮ್ಸ್‌ ಆಂಡರ್‌ಸನ್‌ 6 ಹಾಗೂ ಶೋಯೆಬ್ ಬಷೀರ್‌ ಅಜೇಯ 8 ರನ್‌ ಗಳಿಸಿದರು.

ಭಾರತದ ಪರ ಜಸ್‌ಪ್ರೀತ್‌ ಬುಮ್ರಾ 6 ವಿಕೆಟ್‌, ಕುಲ್‌ದೀಪ್‌ ಯಾದವ್‌ 3 ವಿಕೆಟ್‌ ಹಾಗೂ ಅಕ್ಷರ್‌ ಪಟೇಲ್‌ ಒಂದು ವಿಕೆಟ್‌ ಪಡೆದರು.

andolana

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

2 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

4 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

4 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

4 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

4 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

4 hours ago