ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ಟೀಮ್ ಇಂಡಿಯಾ ನಿನ್ನೆಯಿಂದ ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಮೊದಲ ಎರಡನೇ ದಿನದಾಟದಂತ್ಯಕ್ಕೆ 171 ರನ್ಗಳ ಮುನ್ನಡೆಯನ್ನು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿದ್ದ ಟೀಮ್ ಇಂಡಿಯಾ ಎರಡನೇ ದಿನದಾಟ ಆರಂಭಿಸಿ ಮೊದಲ ಇನ್ನಿಂಗ್ಸ್ನಲ್ಲಿ 396 ರನ್ಗಳಿಗೆ ಆಲ್ಔಟ್ ಆಯಿತು. ಯಶಸ್ವಿ ಜೈಸ್ವಾಲ್ 209 ರನ್ ಗಳಿಸಿ ಅಬ್ಬರಿಸಿದರು. ಅತ್ತ ತನ್ನ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 253 ರನ್ಗಳಿಗೆ ಆಲ್ಔಟ್ ಆಯಿತು. ಎರಡನೇ ದಿನವೇ ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೇ 28 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ ಅಜೇಯ 15 ಹಾಗೂ ನಾಯಕ ರೋಹಿತ್ ಶರ್ಮಾ ಅಜೇಯ 13 ರನ್ ಗಳಿಸಿದ್ದಾರೆ.
ಭಾರತದ ಮೊದಲ ಇನ್ನಿಂಗ್ಸ್: ಯಶಸ್ವಿ ಜೈಸ್ವಾಲ್ 209, ರೋಹಿತ್ ಶರ್ಮಾ 14, ಶುಬ್ಮನ್ ಗಿಲ್ 34, ಶ್ರೇಯಸ್ ಅಯ್ಯರ್ 27, ರಜತ್ ಪಾಟಿದಾರ್ 32, ಅಕ್ಷರ್ ಪಟೇಲ್ 27 ಹಾಗೂ ಶ್ರೀಕರ್ ಭರತ್ 17 ರನ್, ರವಿಚಂದ್ರನ್ ಅಶ್ವಿನ್ 20, ಜಸ್ಪ್ರೀತ್ ಬುಮ್ರಾ 6, ಮುಖೇಶ್ ಕುಮಾರ್ ಶೂನ್ಯ ಹಾಗೂ ಕುಲ್ದೀಪ್ ಯಾದವ್ ಅಜೇಯ 8 ರನ್ ಗಳಿಸಿದರು.
ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್, ಶೋಯೆಬ್ ಬಷೀರ್ ಹಾಗೂ ರೆಹಾನ್ ಅಹ್ಮದ್ ತಲಾ 3 ವಿಕೆಟ್ ಪಡೆದರು ಮತ್ತು ಟಾಮ್ ಹಾರ್ಟ್ಲಿ ಒಂದು ವಿಕೆಟ್ ಕಬಳಿಸಿದರು.
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್: ಜಾಕ್ ಕ್ವಾವ್ಲಿ 76, ಬೆನ್ ಡಕೆಟ್ 21, ಓಲ್ಲಿ ಪೋಪ್ 23, ಜೋ ರೂಟ್ 5, ಜಾನಿ ಬೇರ್ಸ್ಟೋವ್ 25, ನಾಯಕ ಬೆನ್ ಸ್ಟೋಕ್ಸ್ 47, ಬೆನ್ ಫೋಕ್ಸ್ 6, ರೆಹಾನ್ ಅಹ್ಮದ್ 6, ಟಾಮ್ ಹಾರ್ಟ್ಲಿ 21, ಜೇಮ್ಸ್ ಆಂಡರ್ಸನ್ 6 ಹಾಗೂ ಶೋಯೆಬ್ ಬಷೀರ್ ಅಜೇಯ 8 ರನ್ ಗಳಿಸಿದರು.
ಭಾರತದ ಪರ ಜಸ್ಪ್ರೀತ್ ಬುಮ್ರಾ 6 ವಿಕೆಟ್, ಕುಲ್ದೀಪ್ ಯಾದವ್ 3 ವಿಕೆಟ್ ಹಾಗೂ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…