ಕ್ರೀಡೆ

IND vs ENG 2nd Test: ಇಂಗ್ಲೆಂಡ್‌ 253 ರನ್‌ಗಳಿಗೆ ಆಲ್‌ಔಟ್; 2ನೇ ದಿನದಾಟದಂತ್ಯಕ್ಕೆ ಭಾರತಕ್ಕೆ 171 ರನ್‌ಗಳ ಮುನ್ನಡೆ‌

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ನಿನ್ನೆಯಿಂದ ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಮೊದಲ ಎರಡನೇ ದಿನದಾಟದಂತ್ಯಕ್ಕೆ 171 ರನ್‌ಗಳ ಮುನ್ನಡೆಯನ್ನು ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್‌ ನಷ್ಟಕ್ಕೆ 336 ರನ್‌ ಗಳಿಸಿದ್ದ ಟೀಮ್‌ ಇಂಡಿಯಾ ಎರಡನೇ ದಿನದಾಟ ಆರಂಭಿಸಿ ಮೊದಲ ಇನ್ನಿಂಗ್ಸ್‌ನಲ್ಲಿ 396 ರನ್‌ಗಳಿಗೆ ಆಲ್‌ಔಟ್‌ ಆಯಿತು. ಯಶಸ್ವಿ ಜೈಸ್ವಾಲ್‌ 209 ರನ್‌ ಗಳಿಸಿ ಅಬ್ಬರಿಸಿದರು. ಅತ್ತ ತನ್ನ ಮೊದಲ ಇನ್ನಿಂಗ್ಸ್‌ ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಕೇವಲ 253 ರನ್‌ಗಳಿಗೆ ಆಲ್‌ಔಟ್‌ ಆಯಿತು. ಎರಡನೇ ದಿನವೇ ತನ್ನ ಎರಡನೇ ಇನ್ನಿಂಗ್ಸ್‌ ಬ್ಯಾಟಿಂಗ್‌ ಆರಂಭಿಸಿರುವ ಭಾರತ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 28 ರನ್‌ ಗಳಿಸಿದೆ. ಯಶಸ್ವಿ ಜೈಸ್ವಾಲ್‌ ಅಜೇಯ 15 ಹಾಗೂ ನಾಯಕ ರೋಹಿತ್‌ ಶರ್ಮಾ ಅಜೇಯ 13 ರನ್‌ ಗಳಿಸಿದ್ದಾರೆ.

ಭಾರತದ ಮೊದಲ ಇನ್ನಿಂಗ್ಸ್:‌ ಯಶಸ್ವಿ ಜೈಸ್ವಾಲ್‌ 209, ರೋಹಿತ್‌ ಶರ್ಮಾ 14, ಶುಬ್‌ಮನ್‌ ಗಿಲ್‌ 34, ಶ್ರೇಯಸ್‌ ಅಯ್ಯರ್‌ 27, ರಜತ್‌ ಪಾಟಿದಾರ್‌ 32, ಅಕ್ಷರ್‌ ಪಟೇಲ್‌ 27 ಹಾಗೂ ಶ್ರೀಕರ್‌ ಭರತ್‌ 17 ರನ್‌, ರವಿಚಂದ್ರನ್‌ ಅಶ್ವಿನ್‌ 20, ಜಸ್‌ಪ್ರೀತ್‌ ಬುಮ್ರಾ 6, ಮುಖೇಶ್‌ ಕುಮಾರ್‌ ಶೂನ್ಯ ಹಾಗೂ ಕುಲ್‌ದೀಪ್‌ ಯಾದವ್‌ ಅಜೇಯ 8 ರನ್‌ ಗಳಿಸಿದರು.

ಇಂಗ್ಲೆಂಡ್‌ ಪರ ಜೇಮ್ಸ್‌ ಆಂಡರ್‌ಸನ್‌, ಶೋಯೆಬ್‌ ಬಷೀರ್‌ ಹಾಗೂ ರೆಹಾನ್‌ ಅಹ್ಮದ್‌ ತಲಾ 3 ವಿಕೆಟ್‌ ಪಡೆದರು ಮತ್ತು ಟಾಮ್‌ ಹಾರ್ಟ್ಲಿ ಒಂದು ವಿಕೆಟ್‌ ಕಬಳಿಸಿದರು.

ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್:‌ ಜಾಕ್‌ ಕ್ವಾವ್ಲಿ 76, ಬೆನ್ ಡಕೆಟ್‌ 21, ಓಲ್ಲಿ ಪೋಪ್‌ 23, ಜೋ ರೂಟ್‌ 5, ಜಾನಿ ಬೇರ್‌ಸ್ಟೋವ್‌ 25, ನಾಯಕ ಬೆನ್‌ ಸ್ಟೋಕ್ಸ್‌ 47, ಬೆನ್‌ ಫೋಕ್ಸ್‌ 6, ರೆಹಾನ್‌ ಅಹ್ಮದ್‌ 6, ಟಾಮ್‌ ಹಾರ್ಟ್ಲಿ 21, ಜೇಮ್ಸ್‌ ಆಂಡರ್‌ಸನ್‌ 6 ಹಾಗೂ ಶೋಯೆಬ್ ಬಷೀರ್‌ ಅಜೇಯ 8 ರನ್‌ ಗಳಿಸಿದರು.

ಭಾರತದ ಪರ ಜಸ್‌ಪ್ರೀತ್‌ ಬುಮ್ರಾ 6 ವಿಕೆಟ್‌, ಕುಲ್‌ದೀಪ್‌ ಯಾದವ್‌ 3 ವಿಕೆಟ್‌ ಹಾಗೂ ಅಕ್ಷರ್‌ ಪಟೇಲ್‌ ಒಂದು ವಿಕೆಟ್‌ ಪಡೆದರು.

andolana

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

9 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

10 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

11 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

11 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

12 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

13 hours ago