ಕ್ರೀಡೆ

IND vs ENG 2nd Test: ಮೊದಲ ದಿನದಾಟದಂತ್ಯಕ್ಕೆ ಭಾರತ 6 ವಿಕೆಟ್‌ಗೆ 336; 200ರತ್ತ ಜೈಸ್ವಾಲ್ ಚಿತ್ತ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ಇಂದು ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಮ್‌ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್‌ ನಷ್ಟಕ್ಕೆ 336 ರನ್‌ ಗಳಿಸಿದೆ. ಆರಂಭಿಕನಾಗಿ ಕಣಕ್ಕಿಳಿದು ಭರ್ಜರಿ ಪ್ರದರ್ಶನ ನೀಡಿರುವ ಯಶಸ್ವಿ ಜೈಸ್ವಾಲ್‌ 257 ಎಸೆತಗಳಲ್ಲಿ 17 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ 179 ರನ್‌ ಕಲೆಹಾಕಿ ಅಜೇಯರಾಗಿ ಉಳಿದುಕೊಂಡಿದ್ದು ದ್ವಿಶಕದತ್ತ ಚಿತ್ತ ನೆಟ್ಟಿದ್ದಾರೆ. 5 ರನ್‌ ಗಳಿಸಿರುವ ರವಿಚಂದ್ರನ್‌ ಅಶ್ವಿನ್‌ ಸಹ ಅಜೇಯರಾಗಿ ಉಳಿದುಕೊಂಡಿದರು.

ಇನ್ನುಳಿದಂತೆ ನಾಯಕ ರೋಹಿತ್‌ ಶರ್ಮಾ 14, ಶುಬ್‌ಮನ್‌ ಗಿಲ್‌ 34, ಶ್ರೇಯಸ್‌ ಅಯ್ಯರ್‌ 27, ರಜತ್‌ ಪಾಟಿದಾರ್‌ 32, ಅಕ್ಷರ್‌ ಪಟೇಲ್‌ 27 ಹಾಗೂ ಶ್ರೀಕರ್‌ ಭರತ್‌ 17 ರನ್‌ ಗಳಿಸಿದರು. ಇಂಗ್ಲೆಂಡ್‌ ಪರ ಶೋಯೆಬ್‌ ಬಷೀರ್‌ ಹಾಗೂ ರೆಹಾನ್‌ ಅಹ್ಮದ್‌ ತಲಾ ಎರಡು ವಿಕೆಟ್‌ ಪಡೆದರೆ, ಟಾಮ್ ಹಾರ್ಟ್ಲಿ ಹಾಗೂ ಜೇಮ್ಸ್‌ ಆಂಡರ್‌ಸನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

4 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

4 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

4 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

4 hours ago