ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ಟೀಮ್ ಇಂಡಿಯಾ ಇಂದು ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿದೆ. ಆರಂಭಿಕನಾಗಿ ಕಣಕ್ಕಿಳಿದು ಭರ್ಜರಿ ಪ್ರದರ್ಶನ ನೀಡಿರುವ ಯಶಸ್ವಿ ಜೈಸ್ವಾಲ್ 257 ಎಸೆತಗಳಲ್ಲಿ 17 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 179 ರನ್ ಕಲೆಹಾಕಿ ಅಜೇಯರಾಗಿ ಉಳಿದುಕೊಂಡಿದ್ದು ದ್ವಿಶಕದತ್ತ ಚಿತ್ತ ನೆಟ್ಟಿದ್ದಾರೆ. 5 ರನ್ ಗಳಿಸಿರುವ ರವಿಚಂದ್ರನ್ ಅಶ್ವಿನ್ ಸಹ ಅಜೇಯರಾಗಿ ಉಳಿದುಕೊಂಡಿದರು.
ಇನ್ನುಳಿದಂತೆ ನಾಯಕ ರೋಹಿತ್ ಶರ್ಮಾ 14, ಶುಬ್ಮನ್ ಗಿಲ್ 34, ಶ್ರೇಯಸ್ ಅಯ್ಯರ್ 27, ರಜತ್ ಪಾಟಿದಾರ್ 32, ಅಕ್ಷರ್ ಪಟೇಲ್ 27 ಹಾಗೂ ಶ್ರೀಕರ್ ಭರತ್ 17 ರನ್ ಗಳಿಸಿದರು. ಇಂಗ್ಲೆಂಡ್ ಪರ ಶೋಯೆಬ್ ಬಷೀರ್ ಹಾಗೂ ರೆಹಾನ್ ಅಹ್ಮದ್ ತಲಾ ಎರಡು ವಿಕೆಟ್ ಪಡೆದರೆ, ಟಾಮ್ ಹಾರ್ಟ್ಲಿ ಹಾಗೂ ಜೇಮ್ಸ್ ಆಂಡರ್ಸನ್ ತಲಾ ಒಂದೊಂದು ವಿಕೆಟ್ ಪಡೆದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…