ಕ್ರೀಡೆ

IND vs ENG 2nd Test: ಮೊದಲ ದಿನದಾಟದಂತ್ಯಕ್ಕೆ ಭಾರತ 6 ವಿಕೆಟ್‌ಗೆ 336; 200ರತ್ತ ಜೈಸ್ವಾಲ್ ಚಿತ್ತ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ಇಂದು ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಮ್‌ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್‌ ನಷ್ಟಕ್ಕೆ 336 ರನ್‌ ಗಳಿಸಿದೆ. ಆರಂಭಿಕನಾಗಿ ಕಣಕ್ಕಿಳಿದು ಭರ್ಜರಿ ಪ್ರದರ್ಶನ ನೀಡಿರುವ ಯಶಸ್ವಿ ಜೈಸ್ವಾಲ್‌ 257 ಎಸೆತಗಳಲ್ಲಿ 17 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ 179 ರನ್‌ ಕಲೆಹಾಕಿ ಅಜೇಯರಾಗಿ ಉಳಿದುಕೊಂಡಿದ್ದು ದ್ವಿಶಕದತ್ತ ಚಿತ್ತ ನೆಟ್ಟಿದ್ದಾರೆ. 5 ರನ್‌ ಗಳಿಸಿರುವ ರವಿಚಂದ್ರನ್‌ ಅಶ್ವಿನ್‌ ಸಹ ಅಜೇಯರಾಗಿ ಉಳಿದುಕೊಂಡಿದರು.

ಇನ್ನುಳಿದಂತೆ ನಾಯಕ ರೋಹಿತ್‌ ಶರ್ಮಾ 14, ಶುಬ್‌ಮನ್‌ ಗಿಲ್‌ 34, ಶ್ರೇಯಸ್‌ ಅಯ್ಯರ್‌ 27, ರಜತ್‌ ಪಾಟಿದಾರ್‌ 32, ಅಕ್ಷರ್‌ ಪಟೇಲ್‌ 27 ಹಾಗೂ ಶ್ರೀಕರ್‌ ಭರತ್‌ 17 ರನ್‌ ಗಳಿಸಿದರು. ಇಂಗ್ಲೆಂಡ್‌ ಪರ ಶೋಯೆಬ್‌ ಬಷೀರ್‌ ಹಾಗೂ ರೆಹಾನ್‌ ಅಹ್ಮದ್‌ ತಲಾ ಎರಡು ವಿಕೆಟ್‌ ಪಡೆದರೆ, ಟಾಮ್ ಹಾರ್ಟ್ಲಿ ಹಾಗೂ ಜೇಮ್ಸ್‌ ಆಂಡರ್‌ಸನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

3 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

3 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

19 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

20 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

1 day ago