ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ಟೀಮ್ ಇಂಡಿಯಾ ಇಂದು ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿದೆ. ಆರಂಭಿಕನಾಗಿ ಕಣಕ್ಕಿಳಿದು ಭರ್ಜರಿ ಪ್ರದರ್ಶನ ನೀಡಿರುವ ಯಶಸ್ವಿ ಜೈಸ್ವಾಲ್ 257 ಎಸೆತಗಳಲ್ಲಿ 17 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 179 ರನ್ ಕಲೆಹಾಕಿ ಅಜೇಯರಾಗಿ ಉಳಿದುಕೊಂಡಿದ್ದು ದ್ವಿಶಕದತ್ತ ಚಿತ್ತ ನೆಟ್ಟಿದ್ದಾರೆ. 5 ರನ್ ಗಳಿಸಿರುವ ರವಿಚಂದ್ರನ್ ಅಶ್ವಿನ್ ಸಹ ಅಜೇಯರಾಗಿ ಉಳಿದುಕೊಂಡಿದರು.
ಇನ್ನುಳಿದಂತೆ ನಾಯಕ ರೋಹಿತ್ ಶರ್ಮಾ 14, ಶುಬ್ಮನ್ ಗಿಲ್ 34, ಶ್ರೇಯಸ್ ಅಯ್ಯರ್ 27, ರಜತ್ ಪಾಟಿದಾರ್ 32, ಅಕ್ಷರ್ ಪಟೇಲ್ 27 ಹಾಗೂ ಶ್ರೀಕರ್ ಭರತ್ 17 ರನ್ ಗಳಿಸಿದರು. ಇಂಗ್ಲೆಂಡ್ ಪರ ಶೋಯೆಬ್ ಬಷೀರ್ ಹಾಗೂ ರೆಹಾನ್ ಅಹ್ಮದ್ ತಲಾ ಎರಡು ವಿಕೆಟ್ ಪಡೆದರೆ, ಟಾಮ್ ಹಾರ್ಟ್ಲಿ ಹಾಗೂ ಜೇಮ್ಸ್ ಆಂಡರ್ಸನ್ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…